ಕಮಲ್ ಪಂತ್ 
ರಾಜ್ಯ

ಬೆಂಗಳೂರು: ಪಾರ್ಕಿಂಗ್ ಗೆ ಹೊಸ ನೀತಿ, ಸಾರ್ವಜನಿಕ ಸಲಹೆಗಳಿಗೆ ಆಯುಕ್ತ ಕಮಲ್ ಪಂತ್ ಆಹ್ವಾನ

ರಾಜ್ಯ ಸರ್ಕಾರ ಪರಿಗಣಿಸುತ್ತಿರುವ ಬೆಂಗಳೂರಿನ ಹೊಸ ಪಾರ್ಕಿಂಗ್ ನೀತಿಗಾಗಿ ಸಾರ್ವಜನಿಕ ಸಲಹೆಗಳಿಗೆ ನಗರ ಆಯುಕ್ತ ಕಮಲ್ ಪಂತ್ ಆಹ್ವಾನ ನೀಡಿದ್ದಾರೆ. 

ಬೆಂಗಳೂರು: ರಾಜ್ಯ ಸರ್ಕಾರ ಪರಿಗಣಿಸುತ್ತಿರುವ ಬೆಂಗಳೂರಿನ ಹೊಸ ಪಾರ್ಕಿಂಗ್ ನೀತಿಗಾಗಿ ಸಾರ್ವಜನಿಕ ಸಲಹೆಗಳಿಗೆ ನಗರ ಆಯುಕ್ತ ಕಮಲ್ ಪಂತ್ ಆಹ್ವಾನ ನೀಡಿದ್ದಾರೆ. 

ರಾಜ್ಯ ಸರ್ಕಾರ ನಗರದ ಪಾರ್ಕಿಂಗ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಲು ಮುಂದಾಗಿದ್ದು  ಬದಲಾವಣೆಗಳನ್ನು ಜಾರಿಗೆ ತರುವ ಯೋಜನೆ ಹೊಂದಿದೆ. ಬೆಂಗಳೂರು ನಗರದಲ್ಲಿ ಸೂಕ್ತವಾದ ಪಾರ್ಕಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸುವುದು ಹೇಗೆ ಎಂಬುದರ ಬಗ್ಗೆ ನೆಟ್ಟಿಗರಿಂದ ಪಂತ್ ಸಲಹೆ ಕೇಳಿದ್ದಾರೆ. 

ನಗರದಲ್ಲಿ ಅಕ್ರಮ ಪಾರ್ಕಿಂಗ್ ಸೇರಿದಂತೆ ಪಾರ್ಕಿಂಗ್ ಸ್ಥಳಗಳಿಗೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳಿದ್ದು, ಜನತೆ ಪಾರ್ಕಿಂಗ್ ಜಾಗಗಳ ಕೊರತೆ, ಅದರಿಂದ ರಸ್ತೆಗಳಲ್ಲಿ ಉಂಟಾಗುತ್ತಿರುವ ಅಡಚಣೆ ಬಗ್ಗೆ ದೂರುತ್ತಿದ್ದಾರೆ. ನಗರ ಭೂ ಸಾರಿಗೆ ನಿರ್ದೇಶನಾಲಯದಿಂದ ನೀಡಲಾಗಿರುವ ಪಾರ್ಕಿಂಗ್ ನೀತಿಯನ್ನೇ ಸದ್ಯಕ್ಕೆ ಪರಿಗಣಿಸಲಾಗಿದೆ ಎಂದು ಪಂತ್ ಮಾಹಿತಿ ನೀಡಿದ್ದಾರೆ.
 
ಪಾರ್ಕಿಂಗ್ ನೀತಿ 2.0 ನ ಕರಡು ಪ್ರತಿಯನ್ನು ಡಿಯುಎಲ್ ಟಿ ನೀಡಿದ್ದು, ಸರ್ಕಾರ ಫೆಬ್ರವರಿಯಲ್ಲಿ ಅನುಮೋದನೆ ನೀಡಿತ್ತು. ಆದರೆ ಈ ನೀತಿ ಜಾರಿಗೆ ದಿನಾಂಕ ಇನ್ನೂ ನಿಗದಿಯಾಗಿಲ್ಲ, ನೀತಿ ಜಾರಿಯ ಬಗ್ಗೆ ಸಮಾಲೋಚನೆ ಪ್ರಗತಿಯಲ್ಲಿದೆ ಎಂದು ಪಂತ್ ತಿಳಿಸಿದ್ದಾರೆ. 

ಈ ನೀತಿ ಜಾರಿಯಾದಲ್ಲಿ ಬೆಂಗಳೂರಿನ ಪಾರ್ಕಿಂಗ್ ಜಾಗಗಳ ಕೊರತೆಯ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ ಇದೆ. ನಿಗದಿತ ಸ್ಥಳಗಳಲ್ಲಿ ವಾರ್ಷಿಕ ಮೊತ್ತವನ್ನು ಪಾವತಿ ಮಾಡಿ ವಾಹನ ನಿಲುಗಡೆ ನೀತಿಯ ಪ್ರಮುಖ ಅಂಶವಾಗಿದೆ.   

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT