ಸಿಎಂ ಬೊಮ್ಮಾಯಿ 
ರಾಜ್ಯ

ಬೆಂಗಳೂರು: ಹೊರಮಾವು ವಾರ್ಡ್​ನ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೊರಮಾವು ವಾರ್ಡ್​ನ ಬಿಡಿಎಸ್ ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೊರಮಾವು ವಾರ್ಡ್​ನ ಬಿಡಿಎಸ್ ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಹ ನೀರಿನ ಸಮಸ್ಯೆ ಆಗಿಂದಾಗ್ಗೆ ಆಗುತ್ತಿದೆ. ಸಚಿವ ಬಸವರಾಜ ಬೈರತಿಯವರು ಮಳೆ ನೀರಿನಿಂದಾಗಿರುವ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಜನರಿಗೆ ಪರಿಹಾರ ಕೊಟ್ಟಿದ್ದಾರೆ ಎಂದು ತಿಳಿಸಿದರು.

ಯಲಹಂಕ ಮತ್ತು ಹೆಬ್ಬಾಳ ವ್ಯಾಲಿಯಿಂದ ಮಳೆನೀರು ಕೆ.ಆರ್.ಪುರಂ, ಮಹದೇವಪುರದ ಮೂಲಕ ಹೋಗುತ್ತದೆ. ರೈಲ್ವೆ ಬ್ಲಾಕೇಡ್ ನಿಂದ ಸುತ್ತಮುತ್ತಲಿನ ಬಡಾವಣೆಗಳಿಗೆ ನೀರು ನುಗ್ಗುತ್ತಿದೆ. ಹೆಬ್ಬಾಳ ವ್ಯಾಲಿ ನೀರು 125 ಅಡಿ ಅಗಲ ಇರುವ ಚರಂಡಿಯಿಂದ ಬರುತ್ತಿದೆ. ಅದನ್ನು ಸರಿಯಾಗಿ ನಿರ್ವಹಿಸಲಾಗುತ್ತಿದೆ. ಆದರೆ ರೈಲ್ವೆ ವೆಂಟ್ ಬಹಳ ಚಿಕ್ಕದಿರುವುದರಿಂದ ದೊಡ್ಡ ಪ್ರಮಾಣದಲ್ಲಿ ನೀರು ಹರಿದುಬಂದಾಗ 10-12 ಅಡಿ ನೀರು ಹೊರಗೆ ಹರಿಯುತ್ತಿದೆ. ಅದಕ್ಕಾಗಿ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳೊಂದಿಗೆ ಇಂದೇ ಮಾತನಾಡಿ , ಇದಕ್ಕೆ ಬೇಕಾದ ಹಣಕಾಸಿನ ವ್ಯವಸ್ಥೆಯನ್ನೂ ಮಾಡಿ ರೈಲ್ವೆ ವೆಂಟ್ ನ್ನು ವಿಸ್ತರಿಸಿ ಸಂಪೂರ್ಣವಾಗಿ ನೀರು ಹೋಗಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಅರ್ಕಾವತಿ ಲೇಔಟ್ ಬಳಿ ಬಿಡಿಎ ವತಿಯಿಂದ ಇನ್ನೊಂದು ರೈಲ್ವೇ ವೆಂಟ್​ನನ್ನು ಮಾಡಲಾಗುತ್ತಿದ್ದು, ಬಿಡಿಎ ದವರು ಮಾಡಲು ಸೂಚಿಸಲಾಗಿದೆ. ಅದಕ್ಕೆ ಮುಂದುವರಿದ ಆರ್ ಸಿಸಿ ಲೈನಿಂಗ್ ನ ಚರಂಡಿ ವ್ಯವಸ್ಥೆಯನ್ನೂ ಕಲ್ಕೆರೆಗೆ ಮುಟ್ಟಿಸುವ ಕೆಲಸವನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು . ನಾಗೇನಹಳ್ಳಿ ಕೆರೆಯಿಂದ ಬರುವ ಮುಖ್ಯ ಡ್ರೈನ್ ನ್ನು ಅಗಲೀಕರಣಗೊಳಿಸಿ 3.5 ಕಿ.ಮೀ ವರೆಗೆ ನಿರ್ಮಿಸಿ ಹೆಬ್ಬಾಳ ವ್ಯಾಲಿಗೆ ಸೇರಿಸುವ ಕಾಮಗಾರಿಯನ್ನು ಸಧ್ಯದಲ್ಲಿಯೇ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT