ಸಂಗ್ರಹ ಚಿತ್ರ 
ರಾಜ್ಯ

ಮಕ್ಕಳಲ್ಲಿ ಅಪೌಷ್ಟಿಕತೆ: ಡಿಸೆಂಬರ್​ನಿಂದ ಬಿಸಿಯೂಟದ ವೇಳೆ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧಾರ

ಮಕ್ಕಳಲ್ಲಿ ಅಪೌಷ್ಟಿಕತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಿ​ನಿಂದ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧರಿಸಿದೆ.

ಬೆಂಗಳೂರು: ಮಕ್ಕಳಲ್ಲಿ ಅಪೌಷ್ಟಿಕತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಿ​ನಿಂದ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧರಿಸಿದೆ.

ಯಾದಗಿರಿ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಯ 7 ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ಹೀಗೆ ನಿರ್ಧಾರ ಕೈಗೊಳ್ಳಲಾಗಿದೆ. ಎಲ್ಲರಿಗೂ ಮೊಟ್ಟೆ ವಿತರಿಸಲಾಗುತ್ತದೆ. ಯಾರೂ ಮೊಟ್ಟೆ ತಿನ್ನುವುದಿಲ್ಲವೋ ಅವರಿಗೆ ಬಾಳೆಹಣ್ಣನ್ನು ನೀಡಲಾಗುತ್ತದೆ. 

ಕೆಲವು ಜಿಲ್ಲೆಗಳಲ್ಲಿ ಶೇಕಡಾ 70ಕ್ಕಿಂತಲೂ ಹೆಚ್ಚು ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ. 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಅಪೌಷ್ಟಿಕತೆ ಹಿನ್ನೆಲೆ ಮೊಟ್ಟೆ, ಬಾಳೆಹಣ್ಣು ವಿತರಣೆಗೆ ನಿರ್ಧಾರ ಮಾಡಲಾಗಿದೆ. 

ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 74, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 72.4, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 72.3, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 70.7, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 70.6, ಬೀದರ್ ಜಿಲ್ಲೆಯಲ್ಲಿ ಶೇಕಡಾ 69.1, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 68 ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ.

ಏಳು ಜಿಲ್ಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದಲೂ ಬಳಲುತ್ತಿರುವ ಬಗ್ಗೆ ತಿಳಿದುಬಂದಿದೆ. ಅಪೌಷ್ಟಿಕತೆ ರಕ್ತಹೀನತೆ ಬಳಲುವಿಕೆ ಹಿನ್ನೆಲೆಯಲ್ಲಿ ಡಿಸೆಂಬರ್ ನಿಂದ ಮೊಟ್ಟೆ ಬಾಳೆಹಣ್ಣು ವಿತರಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT