ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಕಾರ್ಯಾಲಯದ ಇಬ್ಬರು ಅಧಿಕಾರಿಗಳಿಗೆ ಕೋವಿಡ್ ಪಾಸಿಟಿವ್ 

 ಮುಖ್ಯಮಂತ್ರಿ ಕಾರ್ಯಾಲಯದ ಇಬ್ಬರು ಅಧಿಕಾರಿಗಳಿಗೆ ಕೋವಿಡ್-19 ಪಾಸಿಟಿವ್ ಸೋಮವಾರ ದೃಢಪಟ್ಟಿದೆ. ಇದರಿಂದಾಗಿ ಮುಖ್ಯಮಂತ್ರಿಗಳ ಕಾರ್ಯಾಲಯವನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಇತರ ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಕಾರ್ಯಾಲಯದ ಇಬ್ಬರು ಅಧಿಕಾರಿಗಳಿಗೆ ಕೋವಿಡ್-19 ಪಾಸಿಟಿವ್ ಸೋಮವಾರ ದೃಢಪಟ್ಟಿದೆ. ಇದರಿಂದಾಗಿ ಮುಖ್ಯಮಂತ್ರಿಗಳ ಕಾರ್ಯಾಲಯವನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಇತರ ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಭೆಯನ್ನು ರೇಸ್ ಕೋರ್ಸ್ ರಸ್ತೆಯ ಅಧಿಕೃತ ಕಚೇರಿಗೆ ಸ್ಥಳಾಂತರಿಸಲಾಗಿದೆ. 

ಕೃಷ್ಣಾದಲ್ಲಿ ಪೊಲೀಸ್ ಸಿಬ್ಬಂದಿ  ಸೇರಿದಂತೆ ಸುಮಾರು 50 ಸಿಬ್ಬಂದಿ ಮತ್ತು ವಿಧಾನಸೌಧದ ಮುಖ್ಯಮಂತ್ರಿಗಳ ಕಾರ್ಯಾಲಯದಲ್ಲಿ 50 ನೌಕರರಿದ್ದಾರೆ. ಕುಮಾರ ಕೃಪಾ ರಸ್ತೆಯಲ್ಲಿನ ಕೃಷ್ಣಾದಲ್ಲಿ ಕೆಲಸ ಮಾಡುತ್ತಿದ್ದಇಬ್ಬರು ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಆಗಿರುವುದಾಗಿ ಮುಖ್ಯಮಂತ್ರಿಗಳ ಕಾರ್ಯಾಲಯ ಹೇಳಿದೆ. ಆದರೆ, ಇವರಿಬ್ಬರಲ್ಲಿ ಒಬ್ಬರು ಅಧಿಕೃತ ಕೆಲಸಕ್ಕಾಗಿ ವಿಧಾನಸೌಧದ  ಮುಖ್ಯಮಂತ್ರಿಗಳ ಕಚೇರಿಗೆ ಭೇಟಿ ನೀಡಿದ್ದು, ಅಲ್ಲೂ ಸೋಂಕು ಹರಡುವ ಸಾಧ್ಯತೆಯಿತ್ತು. ಅದೃಷ್ಟವಶಾತ್ ಭಾನುವಾರ ಮತ್ತು ಸೋಮವಾರ ಕಚೇರಿಗಳಿಗೆ ರಜೆ ಇತ್ತು ಮೂಲಗಳು ಹೇಳಿವೆ.

ಮಂಗಳವಾರ ಕೃಷ್ಣಾದಲ್ಲಿ ನಿಗದಿಯಾಗಿದ್ದ ಎಲ್ಲಾ ಸಭೆಗಳನ್ನು ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಸ್ಥಳಾಂತರಿಸಲಾಯಿತು. ಬೊಮ್ಮಾಯಿ ಮತ್ತು ಅವರ ಎಲ್ಲಾ ಸಿಬ್ಬಂದಿ ಪರೀಕ್ಷಿಸಲಾಗಿದ್ದು, ನೆಗೆಟಿವ್ ವರದಿ ಬಂದಿದೆ. ಕೃಷ್ಣಾ ಆವರಣವನ್ನು ಸ್ಯಾನಿಟೈಸ್ ಮಾಡಲಾಗಿದೆ. ಆದರೆ, ವಿಧಾನಸೌಧದ ಸಿಎಂಒ ಕಚೇರಿ ಕಚೇರಿಯನ್ನು ಮಾಡಿಲ್ಲ. ಸ್ಯಾನಿಟೈಸ್ ಗಾಗಿ ಡಿಪಿಎಆರ್ ನನ್ನು ಕೋರಿರುವುದಾಗಿ ಮೂಲಗಳು ಹೇಳಿವೆ. 

ರಾಜ್ಯದಲ್ಲಿ ಕಳೆದ ಕೆಲವು ವಾರಗಳಲ್ಲಿ ಕೋವಿಡ್ ಪಾಸಿಟಿವ್ ಕೇಸ್ ಗಳ ಸಂಖ್ಯೆ ಕಡಿಮೆಯಾಗಿದೆ. ಸೋಮವಾರ ಸಕ್ರಿಯ ಪ್ರಕರಣಗಳ ಸಂಖ್ಯೆ 7 ಸಾವಿರಕ್ಕಿಂತ ಕಡಿಮೆಯಿದ್ದರೆ ಚೇತರಿಕೆ ದರ ಹೆಚ್ಚಾಗಿದೆ. ಮರಣ ಪ್ರಮಾಣ ಕಡಿಮೆಯಿದೆ. ಕಳೆದ ವಾರ ಪಾಸಿಟಿವ್ ಹೊಂದಿದ್ದ ಕೃಷ್ಣಾದ ಅಧಿಕಾರಿಯೊಬ್ಬರಿಗೆ ಎರಡು ಬಾರಿ ನೆಗೆಟಿವ್ ಬಂದಿದೆ. ಕೃಷ್ಣಾದಲ್ಲಿನ ಬಹುತೇಕ ಅಧಿಕಾರಿಗಳಿಗೆ ನೆಗೆಟಿವ್ ವರದಿ ಬಂದಿರುವುದಾಗಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

POCSO case: ಯಡಿಯೂರಪ್ಪಗೆ ಸಂಕಷ್ಟ, ಡಿ. 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!

ಮೆದುಳು ತಿನ್ನುವ ಅಮೀಬಾ: ಶಬರಿಮಲೆ ಭಕ್ತರಿಗೆ ರಾಜ್ಯ ಆರೋಗ್ಯ ಇಲಾಖೆಯ ಮಾರ್ಗಸೂಚಿ, ಮುನ್ನೆಚ್ಚರಿಕೆ ಕ್ರಮಗಳೇನು?

Chikkaballapur: ಅಡ್ಡಾದಿಡ್ಡಿ ಸ್ಕೂಟಿ ಚಾಲನೆ; ಪ್ರಶ್ನಿಸಿದ ಬೈಕ್​​ ಸವಾರನಿಗೆ ಚಾಕು ಇರಿತ, ಪೊಲೀಸ್ ಠಾಣೆಯಲ್ಲೇ ಲೇಡಿ ಹೈಡ್ರಾಮಾ, Video

ಬೆಳಗಾವಿ: ಮಲಗಿದ್ದಲ್ಲೇ ಜೀವಬಿಟ್ಟ ಮೂವರು ಯುವಕರು; ನಿಗೂಢ ಸಾವಿನಿಂದ ಪೋಷಕರ ಆಕ್ರಂದನ!

'ಆಪರೇಷನ್ ಕಾಡಾನೆ' ಸಕ್ಸಸ್: ನಾಲೆಗೆ ಬಿದ್ದು ಒದ್ದಾಡುತ್ತಿದ್ದ ಗಜರಾಜನ ರಕ್ಷಣೆ, ಅರಣ್ಯ ಇಲಾಖೆ ಸಾಹಸಕ್ಕೆ ಶ್ಲಾಘನೆ! Video

SCROLL FOR NEXT