ವರ್ತೂರು ಕೆರೆಯಲ್ಲಿ ನೊರೆ (ಸಂಗ್ರಹ ಚಿತ್ರ) 
ರಾಜ್ಯ

ಸರ್ಕಾರ, ಅಧಿಕಾರದ ನಿರ್ಲಕ್ಷ್ಯಕ್ಕೆ ನಲುಗುತ್ತಿರುವ ವರ್ತೂರು ಕೆರೆ; ಮತ್ತೆ ಪ್ರಾರಂಭವಾಯ್ತು ವಿಷಕಾರಿ ನೊರೆ!

ವರ್ತೂರು ಕೆರೆಯಲ್ಲಿ ಮತ್ತೆ ವಿಷಕಾರಿ ನೊರೆ ಪ್ರಾರಂಭವಾಗಿದ್ದು, ಸ್ಥಳೀಯರು ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಯ ನಿರ್ಲಕ್ಷ್ಯತನದ ಕೊರತೆಯ ವರ್ತನೆ ಕಾರಣ ಎಂದು ಆರೋಪಿಸಿದ್ದಾರೆ. 

ಬೆಂಗಳೂರು: ವರ್ತೂರು ಕೆರೆಯಲ್ಲಿ ಮತ್ತೆ ವಿಷಕಾರಿ ನೊರೆ ಪ್ರಾರಂಭವಾಗಿದ್ದು, ಸ್ಥಳೀಯರು ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಯ ನಿರ್ಲಕ್ಷ್ಯತನದ ಕೊರತೆಯ ವರ್ತನೆ ಕಾರಣ ಎಂದು ಆರೋಪಿಸಿದ್ದಾರೆ. 

ನಿಗದಿತ ಸಮಯದಲ್ಲಿ ಕೆರೆಯನ್ನು ಸ್ವಚ್ಛಗೊಳಿಸುವ ಕಾಮಗಾರಿಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯತನ ತೋರುತ್ತಿದ್ದಾರೆ. ಎನ್ ಜಿಟಿಯ ಮಾಜಿ ಸದಸ್ಯರು ರಚಿಸಿದ್ದ ಸಮಿತಿ ಹಾಗೂ ನಾಗರಿಕರು ಈ ಬಗ್ಗೆ ಮಾತನಾಡಿದ್ದು, 2021 ರಲ್ಲಿ ಒಳಚರಂಡಿ ಸಂಸ್ಕರಣಾ ಘಟಕಗಳು ನಿರ್ಮಾಣವಾಗಬೇಕಿತ್ತು. ಆದರೆ ಇನ್ನೂ ಆ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಹೇಳಿದ್ದಾರೆ. 
 
ಎನ್ ಜಿಟಿಯ ಮಾಜಿ ಸಮಿತಿ ಸದಸ್ಯರ ಅವಧಿ ಮಾರ್ಚ್ 2020 ಕ್ಕೆ ಪೂರ್ಣಗೊಂಡಿದ್ದು, ಈ ಬಳಿಕ ಮುಖ್ಯಕಾರ್ಯದರ್ಶಿ ನೇತೃತ್ವದ ಸಮಿತಿ ರಚನೆಯಾಗಬೇಕಿತ್ತು. ಆದರೆ ಅದೂ ಆಗಿಲ್ಲ. 

"ನಾಗರಿಕ ಸಮಿತಿಯ ಸದಸ್ಯರೊಬ್ಬರು ಇಲ್ಲಿನ ಬೆಳವಣಿಗೆಗಳ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ್ದು, ಎಸ್ ಟಿಪಿಗಳನ್ನು 2020 ರ ಸೆಪ್ಟೆಂಬರ್ ವೇಳೆಗೆ ಪೂರ್ಣಗೊಳಿಸಬೇಕಿತ್ತು. ಆದರೆ ಸರ್ಕಾರ ಎನ್ ಜಿಟಿಯಿಂದ ವಿಸ್ತರಣೆ ಪಡೆದಿದ್ದರ ಪರಿಣಾಮ ಗಡುವು ಮಾರ್ಚ್ 2021 ಕ್ಕೆ ವಿಸ್ತರಣೆಯಾಗಿತ್ತು. ಆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಈಗ ಸಂಸ್ಕರಣೆಯಾಗದ ಒಳಚರಂಡಿ ನೀರು ಹಾಗೂ ಕಲುಶಿತ ನೀರು ಕೆರೆಗೆ ಹರಿಯುತ್ತಿದೆ. ನೀರಿನ ಗುಣಮಟ್ಟ ಹದಗೆಟ್ಟಾಗ ಕೆರೆಯಲ್ಲಿ ಅಪಾರ ಪ್ರಮಾಣದ ವಿಷಕಾರಿ ನೊರೆ ಉಂಟಾಗುತ್ತದೆ" ಎಂದು ಹೇಳಿದ್ದಾರೆ.

ವರ್ತೂರು ಕೆರೆಯ ಸುತ್ತಮುತ್ತಲಿನ ಮಂದಿ ಅದರ ನಿಗಾ ವಹಿಸುತ್ತಿದ್ದು, ಕೆರೆಗೆ ತ್ಯಾಜ್ಯ, ಪ್ಲಾಸ್ಟಿಕ್ ಹಾಗೂ ಸಂಸ್ಕರಣೆಯಾಗದ ನೀರು ಹರಿಯುತ್ತಿರುವ ಫೋಟೋ, ವಿಡಿಯೋಗಳನ್ನು ಸರ್ಕಾರದೊಂದಿಗೆ ಹಂಚಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ. 

ಬೆಳ್ಳಂದೂರು ಕೆರೆ ಹಾಗೂ ವರ್ತೂರು ಕೆರೆಗಳ ಹೂಳು ತೆಗೆಯುವ ಪ್ರಕ್ರಿಯೆ ಬಹುತೇಕ ನಿಂತೇ ಹೋಗಿದೆ. 2022 ರ ವೇಳೆಗೆ ಎರಡೂ ಕೆರೆಗಳನ್ನು ಸ್ವಚ್ಛಗೊಳಿಸುವ ಯೋಜನೆ ಹೊಂದಲಾಗಿತ್ತು. ಆದರೆ ಈ ವರೆಗೂ 30,000 ಟ್ರಕ್ ಲೋಡ್ ನಷ್ಟು ಹೂಳನ್ನು ಮಾತ್ರ ಹೊರತೆಗೆಯಲಾಗಿದೆ. ಕೆರೆಯಲ್ಲೀಗ ಇರುವುದು ಮಳೆಯ ನೀರು ಹಾಗೂ ಸಂಸ್ಕರಣೆಯಾಗದ ಚರಂಡಿ ನೀರಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT