ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಒಂದೇ ಶಾಲೆ 33 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು; ಪೋಷಕರಲ್ಲಿ ಮನೆ ಮಾಡಿದ ಆತಂಕ

ನಗರದ ದೊಮ್ಮಸಂದ್ರದಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ 33 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರು: ನಗರದ ದೊಮ್ಮಸಂದ್ರದಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ 33 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.

‘ದಿ ಇಂಟರ್‌ನ್ಯಾಷನಲ್ ಸ್ಕೂಲ್ ಬೆಂಗಳೂರು’ ಶಿಕ್ಷಣ ಸಂಸ್ಥೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಅಲ್ಲಿ ಈವರೆಗೆ ವಿದ್ಯಾರ್ಥಿಗಳು ಸೇರಿದಂತೆ 497 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 8ನೇ ತರಗತಿಯ ಒಬ್ಬ ವಿದ್ಯಾರ್ಥಿ, 9ನೇ ತರಗತಿಯ 12 ವಿದ್ಯಾರ್ಥಿಗಳು, 10ನೇ ತರಗತಿಯ 8 ವಿದ್ಯಾರ್ಥಿಗಳು, 11ನೇ ತರಗತಿಯ 3 ವಿದ್ಯಾರ್ಥಿಗಳು ಹಾಗೂ 12 ತರಗತಿಯ 9 ವಿದ್ಯಾರ್ಥಿಗಳು ಕೋವಿಡ್ ಪೀಡಿತರಾಗಿದ್ದಾರೆ.

32 ವಿದ್ಯಾರ್ಥಿಗಳಿಗೆ ಸಂಸ್ಥೆಯ ವೈದ್ಯಕೀಯ ಕೇಂದ್ರದಲ್ಲಿಯೇ ಆರೈಕೆ ಮಾಡಲಾಗುತ್ತಿದೆ.  ಮಹದೇವಪುರ ವಲಯದಲ್ಲಿ ವಾಸವಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದ್ದವು. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು. ಕೋವಿಡ್ ಪೀಡಿತರಾಗಿರುವುದು ದೃಢಪಡುತ್ತಿದ್ದಂತೆ ಎಲ್ಲ ನೇರ ಹಾಗೂ ಪರೋಕ್ಷ ಸಂಪರ್ಕಿತರನ್ನು ಪರೀಕ್ಷೆ ಮಾಡಲಾಗಿದೆ.

‘ಶಿಕ್ಷಣ ಸಂಸ್ಥೆಯ ಎಲ್ಲ ಸಿಬ್ಬಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಸೋಂಕಿತರು ಲಕ್ಷಣ ರಹಿತರಾಗಿದ್ದಾರೆ. ಹೀಗಾಗಿ, ಆಸ್ಪತ್ರೆಗೆ ದಾಖಲಿಸಲಿಲ್ಲ. ಸಂಪರ್ಕಿತರಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಶಿಕ್ಷಣ ಸಂಸ್ಥೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಸೋಂಕಿತ ವಿದ್ಯಾರ್ಥಿಗಳಿಗೆ ಆರೈಕೆ ಒದಗಿಸುತ್ತಿರುವ ಕೇಂದ್ರ ಹಾಗೂ ವಸತಿ ನಿಲಯವನ್ನು ಪ್ರತ್ಯೇಕಿಸಲಾಗಿದೆ’ ಎಂದು ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ. ಶ್ರೀನಿವಾಸ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT