ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಶೌಚಾಲಯ ಸೌಲಭ್ಯ ಪೂರೈಕೆಯಲ್ಲಿ ತಾರತಮ್ಯ: ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ

ರಾಜ್ಯದಲ್ಲಿ ಶೌಚಾಲಯ ಸೌಲಭ್ಯ ಪೂರೈಕೆಯಲ್ಲಿ ತಾರತಮ್ಯಗಳು ಕಂಡು ಬಂದಿದೆ ಎಂದು 5ನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ತನ್ನ ವರದಿಯಲ್ಲಿ ತಿಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಶೌಚಾಲಯ ಸೌಲಭ್ಯ ಪೂರೈಕೆಯಲ್ಲಿ ತಾರತಮ್ಯಗಳು ಕಂಡು ಬಂದಿದೆ ಎಂದು 5ನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ತನ್ನ ವರದಿಯಲ್ಲಿ ತಿಳಿಸಿದೆ.

ಉತ್ತರ ಕರ್ನಾಟಕದ 12 ಜಿಲ್ಲೆಗಳಿಗೆ ಹೋಲಿಸಿದರೆ ದಕ್ಷಿಣ ಕರ್ನಾಟಕದ 15 ಜಿಲ್ಲೆಗಳು ಮತ್ತು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಶೌಚಾಲಯಗಳ ವ್ಯವಸ್ಥೆ ಹೆಚ್ಚಾಗಿರುವುದು ಕಂಡು ಬಂದಿದೆ.

ದಕ್ಷಿಣ ಮತ್ತು ಎಲ್ಲಾ ಕರಾವಳಿ ಜಿಲ್ಲೆಗಳಲ್ಲಿ ಶೌಚಾಲಯ ವ್ಯವಸ್ಥೆಗಳು ಶೇ.90 ರಷ್ಟಿದ್ದರೆ, ಉತ್ತರ ಕರ್ನಾಟಕದ ಒಂದು ಜಿಲ್ಲೆ ಕೂಡ ಶೇ.90 ರಷ್ಟನ್ನು ತಲುಪಿಲ್ಲ ಎಂದು ವರದಿಯಲ್ಲಿ ತಿಳಿಸಿದೆ.

ಸೂಕ್ತ ರೀತಿಯ ನೈರ್ಮಲ್ಯ ಸೌಲಭ್ಯಗಳಿಲ್ಲದ ಕುಟುಂಬಗಳು ಅತಿಸಾರ, ಭೇದಿ ಮತ್ತು ಟೈಫಾಯಿಡ್‌ನಂತಹ ರೋಗಗಳ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ ಎಂದು ಸಮೀಕ್ಷೆಯು ವರದಿಯಲ್ಲಿ ತಿಳಿಸಿದೆ.

ಕರ್ನಾಟಕದಲ್ಲಿ ಶೇ.83.1 ಕುಟುಂಬಗಳು ಶೌಚಾಲಯ ಸೌಲಭ್ಯವನ್ನು ಹೊಂದಿದ್ದು, ಗ್ರಾಮೀಣ ಪ್ರದೇಶಗಳಿಗಿಂತ (75.9%) ನಗರ ಪ್ರದೇಶಗಳಲ್ಲಿ (93.3%) ಶೌಚಾಲಯ ಸೌಲಭ್ಯಗಳು ಹೆಚ್ಚಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಥವಾ ಇತರೆ ಹಿಂದುಳಿದ ವರ್ಗಕ್ಕೆ ಸೇರದ ಕುಟುಂಬಗಳಲ್ಲಿ ಶೇ.76 ರಿಂದ ಶೇ.88 ರಷ್ಟು ಪರಿಶಿಷ್ಟ ಜಾತಿಯವರಿಗೆ ಶೌಚಾಲಯಗಳ ಪ್ರವೇಶವಿದೆ ಎಂದು ಸಮೀಕ್ಷೆ ಹೇಳಿದೆ.

“ಬಾಗಲಕೋಟೆ, ಕಲಬುರಗಿ, ಬಿಜಾಪುರ, ರಾಯಚೂರು, ಯಾದಗಿರಿ ಮುಂತಾದ ಜಿಲ್ಲೆಗಳಲ್ಲಿ ಈ ವ್ಯವಸ್ಥೆಗಳು ಶೋಚನೀಯ ಸ್ಥಿತಿಯಲ್ಲಿದ್ದು, ನೀರು ಪೂರೈಕೆಯಲ್ಲಿ ಕೊರತೆ, ಶೌಚಾಲಯ ಬಳಕೆಯಲ್ಲಿನ ಸಾಂಸ್ಕೃತಿಕ ಅಡೆತಡೆಗಳು ಇದಕ್ಕೆ ಕಾರಣವೆಂದು ಹೇಳಲಾಗುತ್ತಿದೆ.

ಶೌಚಾಲಯಗಳು ಇಲ್ಲದಿರುವಾಗ ಜನರು ಹೇಗೆ ಮಲವಿಸರ್ಜನೆ ಮಾಡುತ್ತಾರೆ ಎಂಬುದನ್ನು ತಿಳಿಯುವುದು ಮುಖ್ಯವಾಗಿದೆ. ಬಯಲು ಮಲವಿಸರ್ಜನೆಯಾಗಿದ್ದರೆ, ಮಹಿಳೆಯರು ಮತ್ತು ಹೆಣ್ಣು ಮಕ್ಕಳಿಗೆ ಕಷ್ಟಕರವಾಗುತ್ತದೆ ಎಂದು ಸಾರ್ವಜನಿಕ ಆರೋಗ್ಯ ವೈದ್ಯೆ ಮತ್ತು ಸಂಶೋಧಕಿ ಡಾ ಸಿಲ್ವಿಯಾ ಕರ್ಪಗಮ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT