ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್, ನರ್ಸಿಂಗ್ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಪಾಸಿಟಿವ್

ಧಾರವಾಡ ಮತ್ತು ಬೆಂಗಳೂರಿನ ಶಿಕ್ಷಣ ಸಂಸ್ಥೆಗಳಲ್ಲಿ ಎರಡು ಕೋವಿಡ್-19 ಕ್ಲಸ್ಟರ್‌ಗಳ ಸುದ್ದಿ ಹೊರಬಿದ್ದ ಮಾರನೇ ದಿನವೇ ರಾಜಧಾನಿಯಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ಹೊರಹೊಮ್ಮಿದೆ.

ಬೆಂಗಳೂರು: ಧಾರವಾಡ ಮತ್ತು ಬೆಂಗಳೂರಿನ ಶಿಕ್ಷಣ ಸಂಸ್ಥೆಗಳಲ್ಲಿ ಎರಡು ಕೋವಿಡ್-19 ಕ್ಲಸ್ಟರ್‌ಗಳ ಸುದ್ದಿ ಹೊರಬಿದ್ದ ಮಾರನೇ ದಿನವೇ ರಾಜಧಾನಿಯಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ಹೊರಹೊಮ್ಮಿದೆ.

ಈ ಬಾರಿ ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನ ಮರಸೂರಿನ ಸ್ಪೂರ್ತಿ ಕಾಲೇಜ್ ಆಫ್ ನರ್ಸಿಂಗ್‌ನ 12 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

"ಈ 12 ವಿದ್ಯಾರ್ಥಿಗಳಿಗೆ ಗುರುವಾರ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಶುಕ್ರವಾರ ಅವರ ವರದಿ ಪಾಸಿಟಿವ್ ಬಂದಿದೆ. ಅವರೆಲ್ಲರನ್ನೂ ಕೋವಿಡ್ -19 ಆರೈಕೆ ಕೇಂದ್ರದಲ್ಲಿ ಪ್ರತ್ಯೇಕಿಸಲಾಗಿದೆ. ಅವರಲ್ಲಿ ಯಾರಿಗೂ ಯಾವುದೇ ಪ್ರಯಾಣದ ಇತಿಹಾಸವಿಲ್ಲ. ಒಬ್ಬರನ್ನು ಹೊರತುಪಡಿಸಿ ಎಲ್ಲರಿಗೂ ಲಸಿಕೆ ಹಾಕಿಸಿಕೊಂಡಿದ್ದಾರೆ" ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಲಸಿಕೆ ಹಾಕದ ಒಬ್ಬ ವಿದ್ಯಾರ್ಥಿಗೆ ಈ ಹಿಂದೆ ಕೋವಿಡ್-19 ಪಾಸಿಟಿವ್ ಬಂದಿತ್ತು. ಹೀಗಾಗಿ ಅವರು ಇನ್ನೂ ಲಸಿಕೆ ಪಡೆದಿಲ್ಲ.  ಎಲ್ಲಾ ವಿದ್ಯಾರ್ಥಿಗಳು ಜ್ವರ, ಶೀತ ಮತ್ತು ಕೆಮ್ಮು ಸೇರಿದಂತೆ ಸೌಮ್ಯ ಕೋವಿಡ್ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT