ಸಿಎಂ ಬೊಮ್ಮಾಯಿ 
ರಾಜ್ಯ

ಕಮಿಷನ್ ದಂಧೆ: ಸ್ವತಂತ್ರ ತನಿಖೆಗೆ ಗುತ್ತಿಗೆದಾರರ ಸಂಘ ಆಗ್ರಹ

ಟೆಂಡರ್ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪರಿಶೀಲಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆವರು ಹೇಳಿದ್ದು, ಈ ನಡುವಲ್ಲೇ ಪ್ರಕರಣವನ್ನು ಸ್ವತಂತ್ರ ತನಿಖೆ ನಡೆಸುವಂತೆ ಗುತ್ತಿಗೆದಾರರ ಸಂಘ ಶುಕ್ರವಾರ ಆಗ್ರಹಿಸಿದೆ.

ಬೆಂಗಳೂರು: ಟೆಂಡರ್ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪರಿಶೀಲಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆವರು ಹೇಳಿದ್ದು, ಈ ನಡುವಲ್ಲೇ ಪ್ರಕರಣವನ್ನು ಸ್ವತಂತ್ರ ತನಿಖೆ ನಡೆಸುವಂತೆ ಗುತ್ತಿಗೆದಾರರ ಸಂಘ ಶುಕ್ರವಾರ ಆಗ್ರಹಿಸಿದೆ.

ಈ ಕುರಿತು ಮಾತನಾಡಿರುವ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರು, ಕಾಲಮಿತಿಯಲ್ಲಿ ಸ್ವತಂತ್ರ ತನಿಖೆ ನಡೆಸಿದರೆ ಸತ್ಯಾಂಶ ಹೊರಬರಲಿದೆ. ಈ ಕುರಿತು ನಾವೂ ಕೂಡ ಮಾಹಿತಿಗಳನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.

ಪ್ರಧಾನಿಗೆ ಬರೆದ ಪತ್ರದಲ್ಲಿ ಗುತ್ತಿಗೆ ನೀಡುವಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಹಲವು ವಿಷಯಗಳನ್ನು ಪ್ರಸ್ತಾಪಿಸಲಾಗಿದೆ. ನೆರೆ ರಾಜ್ಯದ ಗುತ್ತಿಗೆದಾರರನ್ನು ಪ್ರೋತ್ಸಾಹಿಸುತ್ತಿರುವ ಬಗ್ಗೆಯೂ ಸಂಘ ಕಳವಳ ವ್ಯಕ್ತಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಟೆಂಡರ್‌ಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಅವ್ಯವಹಾರ ಕಂಡುಬಂದಲ್ಲಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಸರಕಾರ ಸೂಚಿಸಿದೆ.

ನಿವೃತ್ತ ನ್ಯಾಯಾಧೀಶರ ನೇತೃತ್ವದ ಎರಡು ಸಮಿತಿಗಳು ಟೆಂಡರ್ ಅಂದಾಜು ಮತ್ತು ಷರತ್ತುಗಳನ್ನು ಸಹ ಪರಿಶೀಲಿಸಲಿವೆ ಎಂದು ಬೊಮ್ಮಾಯಿ ಅವರು ಗುರುವಾರ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT