ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನೌಕರಿ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ, ನಕಲಿ ಸರ್ಕಾರಿ ಅಧಿಕಾರಿ ಬಂಧನ

ತಾನು ಕೇಂದ್ರ ಸರ್ಕಾರದ ಡೆಪ್ಯುಟಿ ಕಮಿಷನರ್ ಎಂದು ಹೇಳಿಕೊಂಡು ನಿರುದ್ಯೋಗಿ ಯುವಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ 39 ವರ್ಷದ ನಕಲಿ ಅಧಿಕಾರಿಯನ್ನು ಕೇಂದ್ರ ಅಪರಾಧ...

ಬೆಂಗಳೂರು: ತಾನು ಕೇಂದ್ರ ಸರ್ಕಾರದ ಡೆಪ್ಯುಟಿ ಕಮಿಷನರ್ ಎಂದು ಹೇಳಿಕೊಂಡು ನಿರುದ್ಯೋಗಿ ಯುವಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ 39 ವರ್ಷದ ನಕಲಿ ಅಧಿಕಾರಿಯನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಶನಿವಾರ ಬಂಧಿಸಿದ್ದಾರೆ. 

ಬಂಧಿತ ಆರೋಪಿಯು ಉಡುಪಿಯ ಕುಂದಾಪುರದ ಬಸರೂರು ಗ್ರಾಮದ ರಾಘವೇಂದ್ರ ಪೂಜಾರಿ ಎಂದು ಗುರುತಿಸಲಾಗಿದೆ. ರಾಘವೇಂದ್ರ ರಾಜ್ಯಾದ್ಯಂತ 18ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ 1 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

10ನೇ ತರಗತಿ ತೇರ್ಗಡೆಯಾಗಿ ಬೆಂಗಳೂರಿಗೆ ಬಂದಿದ್ದ ಆರೋಪಿ, ಸುಮಾರು 10 ವರ್ಷಗಳಿಂದ ಜೆಪಿ ನಗರದಲ್ಲಿ ನೆಲೆಸಿದ್ದ. ಆರೋಪಿ ಹಲವರಿಗೆ ವಂಚಿಸಿ ಕೋಟ್ಯಂತರ ಹಣ ಮಾಡಿದ್ದಾನೆ. ಸ್ವಂತ ಊರಿನಲ್ಲಿ ಒಂದು ಮನೆ, ತುಮಕೂರಿನಲ್ಲಿ ಹೋಟೆಲ್, ಕೆಂಗೇರಿಯಲ್ಲಿ ಫ್ಲ್ಯಾಟ್, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹೊಂದಿದ್ದಾನೆ. ಓಡಾಡುವುದಕ್ಕೆ 2 ಕಾರು ಕೂಡಾ ಖರೀದಿ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬನಶಂಕರಿ ಪೊಲೀಸ್ ಠಾಣೆಯಲ್ಲಿ ವಂಚನೆಗೊಳಗಾದ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಿಸಿಬಿಯು ಪ್ರಕರಣ ದಾಖಲಿಸಿಕೊಂಡು ಪೂಜಾರಿಯನ್ನು ಬಂಧಿಸಿದೆ ಎಂದು ಸಿಸಿಬಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಿರುದ್ಯೋಗಿ ಯುವಕರನ್ನು ಗುರಿಯಾಗಿಸಿಕೊಂಡು ರಾಜ್ಯಾದ್ಯಂತ ಸಂಚರಿಸಿ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ನೌಕರಿ ಕೊಡಿಸುತ್ತೇನೆ ಎಂದು ವಂಚಿಸಿದ್ದಾರೆ. ತಾನು ಭೂಮಾಪನ ಇಲಾಖೆಯ ಡೆಪ್ಯುಟಿ ಕಮಿಷನರ್ ಎಂದು ನಕಲಿ ಗುರುತಿನ ಚೀಟಿ ತೋರಿಸಿ, ಅವರು ಕೇಳುವ ಕೆಲಸದ ಆಧಾರದ ಮೇಲೆ ಪ್ರತಿಯೊಬ್ಬರಿಂದ 4 ಲಕ್ಷದಿಂದ  12 ಲಕ್ಷ ರೂಪಾಯಿವರೆಗೆ ವಸೂಲಿ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Vladimir Putin ಭೇಟಿ ಮುನ್ನ ಭಾರತ-ರಷ್ಯಾ ಒಪ್ಪಂದಕ್ಕೆ ಸಹಿ: ಡಿ. 4ರಂದು ದೆಹಲಿಯಲ್ಲಿ 23ನೇ ಶೃಂಗಸಭೆ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರ: ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ, ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿ

ಕುಡುಕರಿಗೊಬ್ಬ, ಬ್ಯಾಚುಲರ್‌ಗಳಿಗೆ ಮತ್ತೊಬ್ಬ ದೇವರು: ಹಿಂದೂಗಳಲ್ಲಿ ಎಷ್ಟು ದೇವರಿದ್ದಾರೆ: 3 ಕೋಟಿ ಇದ್ದಾರಾ? ವಿವಾದವೆಬ್ಬಿಸಿದ ರೇವಂತ್ ರೆಡ್ಡಿ ಹೇಳಿಕೆ

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ; ಸ್ಥಳದಲ್ಲೇ ನಾಲ್ವರು ಯುವಕರ ದುರ್ಮರಣ

Imran Khan ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

SCROLL FOR NEXT