ಸಿದ್ದರಾಮಯ್ಯ 
ರಾಜ್ಯ

ಕಮಿಷನ್ ದಂಧೆ ಬಗ್ಗೆ ಗುತ್ತಿಗೆದಾರರ ಸಂಘದ ದೂರಿನ ಕುರಿತು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ಬಿಡಿಎ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಈ ಸರ್ಕಾರ ಅಧಿಕಾರದಲ್ಲಿರಲು ಯೋಗ್ಯತೆಯಿಲ್ಲ, ಹೀಗಾಗಿ ರಾಷ್ಟ್ರಪತಿ ಆಡಳಿತ ತರಬೇಕೆಂದು ಈಗಾಗಲೇ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಭಾರತ ಸಂವಿಧಾನದ 356ನೇ ವಿಧಿಯಡಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ತರುವ ಎಲ್ಲಾ ಅವಕಾಶಗಳು ಇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾ

ಮೈಸೂರು: ಬಿಡಿಎ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಈ ಸರ್ಕಾರ ಅಧಿಕಾರದಲ್ಲಿರಲು ಯೋಗ್ಯತೆಯಿಲ್ಲ, ಹೀಗಾಗಿ ರಾಷ್ಟ್ರಪತಿ ಆಡಳಿತ ತರಬೇಕೆಂದು ಈಗಾಗಲೇ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಭಾರತ ಸಂವಿಧಾನದ 356ನೇ ವಿಧಿಯಡಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ತರುವ ಎಲ್ಲಾ ಅವಕಾಶಗಳು ಇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿಂದು ಮಾತನಾಡಿದ ಅವರು, ಎಸಿಬಿ ಸರ್ಕಾರದಲ್ಲಿ ಮುಖ್ಯಮಂತ್ರಿಗಳ ಕೈಕೆಳಗೆ ಇದೆ. ಬಿಡಿಎಯಲ್ಲಿನ ಭ್ರಷ್ಟಾಚಾರ ಮತ್ತು ಇತ್ತೀಚೆಗೆ ಸರ್ಕಾರವೇ ಎಸಿಬಿಯಿಂದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿಸಿದೆ. ಪ್ರಧಾನಿ ಮೋದಿಗೆ ಗುತ್ತಿಗೆದಾರರ ಸಂಘದಿಂದ ದೂರು ಹಿನ್ನೆಲೆ, ಸುಪ್ರೀಂ ಕೋರ್ಟ್​ ಜಡ್ಜ್​​ ಅವರಿಂದ ವಿಚಾರಣೆ ಆಗಲಿ, ಯಾರು ಲಂಚ ತೆಗೆದುಕೊಂಡಿದ್ದಾರೆ ಅವರಿಗೆ ತಕ್ಕ ಶಿಕ್ಷೆ ಆಗಲಿ ಎಂದು ಆಗ್ರಹಿಸಿದರು.

ನಾವು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಗುತ್ತಿಗೆ ಅಸೋಸಿಯೇಷನ್ ನವರು ಪತ್ರ ಬರೆದಿದ್ದರೇ. ನಿರ್ದಿಷ್ಟ ಘಟನೆಗಳು ಇಲ್ಲ ಅಂದ ಮೇಲೆ ಕಾರ್ಯದರ್ಶಿಗಳಿಗೆ ಏಕೆ ಸರ್ಕಾರ ಕೊಟ್ಟಿದೆ. ರಾಜ್ಯದ ಸಂಸದರು, ಸಚಿವರು, ಶಾಸಕರು ಶೇಕಡಾ 40ರಷ್ಟು ಕಮಿಷನ್ ನ್ನು ಗುತ್ತಿಗೆಯಲ್ಲಿ ಪಡೆಯುತ್ತಿದ್ದಾರೆ ಎಂದು ಗುತ್ತಿಗೆ ಅಸೋಸಿಯೇಷನ್ ನ ಅಧ್ಯಕ್ಷ ಕೆಂಪಣ್ಣನವರೇ ಪತ್ರ ಬರೆದು ಮಾಧ್ಯಮಗಳ ಮುಂದೆಯೇ ಹೇಳಿದ್ದು ವರದಿಯಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT