ಕಳವು ಮಾಲಿನ ಜೊತೆ ಆರೋಪಿ ವರದರಾಜು ಹಾಗು ರಾಜಾಜಿನಗರ ಪೊಲೀಸರು 
ರಾಜ್ಯ

ಬೆಂಗಳೂರು: ಅರ್ಧ ಕೆಜಿ ಚಿನ್ನ ಕದ್ದಿದ್ದ ಆರೋಪಿ 48 ಗಂಟೆಗಳಲ್ಲಿ ಬಂಧನ

ಸ್ಕ್ರೂ ಡ್ರೈವ್ ನಿಂದ ಡೋರ್ ಲಾಕ್ ಮುರಿದು ಚಿನ್ನ ಎಗರಿಸಿದ್ದ ಆರೋಪಿಯನ್ನು 48 ಗಂಟೆಗಳಲ್ಲಿ ಬಂಧಿಸುವಲ್ಲಿರಾಜಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಸ್ಕ್ರೂ ಡ್ರೈವ್ ನಿಂದ ಡೋರ್ ಲಾಕ್ ಮುರಿದು ಚಿನ್ನ ಎಗರಿಸಿದ್ದ ಆರೋಪಿಯನ್ನು 48 ಗಂಟೆಗಳಲ್ಲಿ ಬಂಧಿಸುವಲ್ಲಿ ರಾಜಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ವರದರಾಜು ಎಂದು ಗುರುತಿಸಲಾಗಿದೆ. ಮಧ್ಯಾಹ್ನದ ಸಮಯದಲ್ಲಿ ಬೀಗ ಹಾಕಿರುವ ಮನೆ ಹಾಗೂ ಕಚೇರಿಗಳನ್ನು ವರದರಾಜು ಟಾರ್ಗೆಟ್ ಮಾಡುತ್ತಿದ್ದನು. ಇದೇ ರೀತಿ ಟ್ರಾವೆಲ್ಸ್ ಕಚೇರಿಯಲ್ಲಿ ಮಾಲೀಕರೊಬ್ಬರು ಚಿನ್ನಾಭರಣ ಇಟ್ಟು ತೆರಳಿದ್ದರು. ಈ ವೇಳೆ ಸ್ಕ್ರೂ ಡ್ರೈವ್ ನಿಂದ ಡೋರ್ ಲಾಕ್ ಮುರಿದು ಆರೋಪಿ ವರದರಾಜು ಚಿನ್ನ ಕದ್ದಿದ್ದಾನೆ.

ಈ ಎಲ್ಲ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ಆಧಾರದ ಮೇಲೆ ಆರೋಪಿ ವರದರಾಜುನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಅರ್ಧ ಕೆಜಿ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಈ ಹಿಂದೆ ನಂದಿನಿ ಲೇಔಟ್ ಪೊಲೀಸರಿಂದ ಆರೋಪಿ ಅರೆಸ್ಟ್ ಆಗಿದ್ದ ವಿಚಾರ ಸಹ ಇದೇ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT