ರಾಜ್ಯ

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರ ಸಾವು

Nagaraja AB

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಸರ್ಕಲ್ ಬಳಿ ನಡೆದಿದೆ. 

ಕಾವೇರಿ ಭವನದಿಂದ ದೊಡ್ಡಬಳ್ಳಾಪುರಕ್ಕೆ ಹೋಗುತ್ತಿದ್ದ ಕೆಎ-40 ಎಫ್-0994 ನಂಬರ್ ನ ಬಸ್ ದ್ವಿಚಕ್ರ ವಾಹನ ಸವಾರನ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಸವಾರ ಸಾವಿಗೀಡಾಗಿದ್ದಾನೆ.

ಅಪಘಾತವಾಗುತ್ತಿದ್ದಂತೆ ಕೆಎಸ್​ಆರ್​ಟಿಸಿ ಬಸ್​ ಚಾಲಕ ಹಾಗೂ ಕಂಡಕ್ಟರ್ ಪರಾರಿಯಾಗಿದ್ದಾರೆ. ಮೃತ ಸವಾರನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹೆಬ್ಬಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

SCROLL FOR NEXT