ಡಿಕೆ ಶಿವಕುಮಾರ್ 
ರಾಜ್ಯ

ಇಸ್ರೊ ಗಗನಯಾನ ಯೋಜನೆ ಸ್ಥಳಾಂತರಕ್ಕೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರೋಧ: ಮೋದಿ, ಬೊಮ್ಮಾಯಿಗೆ ಪತ್ರ

ಗಗನಯಾನ ಯೋಜನೆ ಸ್ಥಳಾಂತರ ಕುರಿತಾಗಿ​ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪತ್ರ ಬರೆದಿದ್ದಾರೆ.

ಬೆಂಗಳೂರು: ಗಗನಯಾನ ಯೋಜನೆ ಸ್ಥಳಾಂತರ ಕುರಿತಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪತ್ರ ಬರೆದಿದ್ದಾರೆ. 

ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಭಾರತೀಯ ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕಾಗಿದೆ. ನಿಮ್ಮ ಬಿಡುವಿಲ್ಲದ ಸಮಯದಲ್ಲೂ ನಮ್ಮ ಮನವಿಯತ್ತ ಗಮನಹರಿಸಿ ಎಂದು ಕೋರುತ್ತೇನೆ ಎಂದು ಡಿಕೆಶಿ ಮನವಿ ಮಾಡಿದ್ದಾರೆ.

ಅಲ್ಲದೆ, ಪತ್ರದಲ್ಲಿ, ಕರ್ನಾಟಕ ನಾಡಿನ ಜನರ ಹೆಮ್ಮೆ, ಆತ್ಮಗೌರವಕ್ಕೆ ಸಂಬಂಧಪಟ್ಟ ಯೋಜನೆ ವಿಚಾರವಾಗಿ ನಾನು ಇಂದು ನಿಮ್ಮ ಗಮನ ಸೆಳೆಯುತ್ತಿದ್ದೇನೆ. ಇದು ನನ್ನ ಕರ್ತವ್ಯವೂ ಆಗಿದೆ.

ಹಲವು ದಶಕಗಳಿಂದ ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಕೇಂದ್ರ ಕಛೇರಿ ಹಾಗೂ ಇದು ಬಾಹ್ಯಾಕಾಶ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಪ್ರತಿಯೊಬ್ಬ ಕನ್ನಡಿಗರು ಹೆಮ್ಮೆ ಪಡುತ್ತಾರೆ.

ನಿಮಗೆ ತಿಳಿದಿರುವಂತೆ 2007ರಿಂದ ಇಸ್ರೋ 'ಮಾನವಸಹಿತ ಬಾಹ್ಯಾಕಾಶ ಗಗನಯಾನ' ಯೋಜನೆಗೆ ಬೇಕಾದ ತಂತ್ರಜ್ಞಾನವನ್ನು ಸಿದ್ಧಪಡಿಸಿಕೊಂಡು ಬಂದಿದೆ ಎಂದೂ ಬರೆದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup, IND vs Pak: ಇಶಾನ್ ಕಿಶಾನ್ ಬ್ಯಾಟಿಂಗ್ ಅಬ್ಬರ; ಸ್ಪಿನ್ ಮೋಡಿಗೆ ಪಾಕ್ ತತ್ತರ, ಭಾರತಕ್ಕೆ 61 ರನ್ ಗೆಲುವು!

T20 World Cup 2026: ಸೂಪರ್ 8 ಹಂತಕ್ಕೆ ಭಾರತ ಲಗ್ಗೆ; ದೇಶಾದ್ಯಂತ ಸಂಭ್ರಮಾಚರಣೆ, ಗಣ್ಯರ ಶುಭಾಶಯ!

'2048 ಬಂದ್ರೂ ಡಿಕೆ ಶಿವಕುಮಾರ್ ಸಿಎಂ ಆಗಲ್ಲ: ಏಕಂದ್ರೆ ನಾವು ಬಿಡಲ್ಲ; ಇನ್ನು ಮುಂದೆ ದೇಶವೂ ನಮ್ಮದೇ, ರಾಜ್ಯವೂ ನಮ್ಮದೇ'

'ಈ ಛಲವಾದಿ ನಾರಾಯಣಸ್ವಾಮಿ ನಾಯಿ ಥರ...ಪಾಪ ಬೊಗಳಿದೆ, ಅದಕ್ಕೆ ನಾವೇನೂ ಕಲ್ಲು ಎಸೆಯಲು ಹೋಗೋದಿಲ್ಲ'

4 ಕೋಟಿ ರೂ. ಮೌಲ್ಯದ ಗ್ರಾಹಕರ ಚಿನ್ನಾಭರಣ ಕದ್ದು, ಆನ್‌ಲೈನ್ ಬೆಟ್ಟಿಂಗ್‌: ಬ್ಯಾಂಕ್ ಮ್ಯಾನೇಜರ್ ಬಂಧನ, ಸಿಕ್ಕಿಬಿದ್ದಿದ್ದೇ ರೋಚಕ!

SCROLL FOR NEXT