ಸಂಗ್ರಹ ಚಿತ್ರ 
ರಾಜ್ಯ

16 ತಿಂಗಳಾದರೂ ಆಸ್ಪತ್ರೆಯ ಶವಾಗಾರದಲ್ಲಿಯೇ ಇದ್ದ 2 ಕೋವಿಡ್ ಮೃತದೇಹಗಳು!

ಬರೋಬ್ಬರಿ 16 ತಿಂಗಳುಗಳಾದರೂ ಕೋವಿಡ್ ಮೃತದೇಹಗಳು ಆಸ್ಪತ್ರೆಯ ಶವಾಗಾರದಲ್ಲಿಯೇ ಇದ್ದ ಘಟನೆಯೊಂದು ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ನಡೆದಿದೆ.

ಬೆಂಗಳೂರು: ಬರೋಬ್ಬರಿ 16 ತಿಂಗಳುಗಳಾದರೂ ಕೋವಿಡ್ ಮೃತದೇಹಗಳು ಆಸ್ಪತ್ರೆಯ ಶವಾಗಾರದಲ್ಲಿಯೇ ಇದ್ದ ಘಟನೆಯೊಂದು ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ನಡೆದಿದೆ.

ಚಾಮರಾಜಪೇಟೆಯ ದುರ್ಗಾ (40) ಹಾಗೂ ಕೆಪಿ ಅಗ್ರಹಾರ ಮೂಲಕ ಮನಿರಾಜು (62) 2020ರ ಜುಲೈ ತಿಂಗಳಿನಲ್ಲಿ ಮೃತಪಟ್ಟಿದ್ದರು. ಮೃತದೇಹಗಳನ್ನು ಆಸ್ಪತ್ರೆಯ ಹಳೆಯ ಶವಾಗಾರದ ಫ್ರೀಜರ್‌ನಲ್ಲಿ ಇರಿಸಲಾಗಿತ್ತು. ಕೊರೋನಾ 2ನೇ ಅಲೆ ವೇಳೆ ಸಾವಿನ ಸಂಖ್ಯೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಹೊಸ ಶವಾಗಾರವನ್ನು ನಿರ್ಮಿಸಿ ಅಲ್ಲಿ ಶವಗಳನ್ನು ಸಾಗಿಸಲಾಗಿತ್ತು. ಆದರೆ, ಸಿಬ್ಬಂದಿಗಳ ನಿರ್ಲಕ್ಷ್ಯ ವರ್ತನೆಯಿಂದಾಗಿ ಹಳೆಯ ಶವಾಗಾರದಲ್ಲಿ ಈ ಎರಡೂ ಮೃತದೇಹಗಳು ಉಳಿದು ಹೋಗಿವೆ. ಶವಗಳನ್ನು ಇರಿಸಿ 16 ತಿಂಗಳುಗಳಾದರೂ ಯಾರೊಬ್ಬರ ಗಮನಕ್ಕೂ ಈ ವಿಚಾರ ಬಂದಿಲ್ಲ.

ಕಳೆದ ಶನಿವಾರ ಆಸ್ಪತ್ರೆಯ ಕೆಲ ಸಿಬ್ಬಂದಿಗಳು ಶವಾಗಾರದ ಆವರಣ ಸ್ವಚ್ಛ ಮಾಡಲೆಂದು ಹೋದಾಗ ಸ್ಥಲದಲ್ಲಿ ದುರ್ವಾಸನೆ ಬರುವುದನ್ನು ಗಮನಿಸಿ ವೈದ್ಯಕೀಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ವೈದ್ಯಕೀಯ ಸಿಬ್ಬಂದಿಗಳು ಪರಿಶೀಲನೆ ನಡೆಸಿದಾಗ ಫ್ರೀಜರ್ ನಲ್ಲಿ ಎರಡು ಮೃತದೇಹಗಳಿರುವುದು ಕಂಡು ಬಂದಿದೆ. ನಂತರ ವೈದ್ಯಕೀಯ ಅಧೀಕ್ಷಕರು ಹಾಗೂ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ ಎರಡೂ ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದ್ದು, ಆಸ್ಪತ್ರೆಯ ಅಧಿಕಾರಿಗಳು ಇಲಾಖಾ ವಿಚಾರಣೆ ನಡೆಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜಾಜಿನಗರ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ನಡುವೆ ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ಇಮ್ತಿಹಾನ್ ಹುಸೇನ್ ಅವರು ಈ ಸಂಬಂಧ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT