ಡಾ.ಕೆ. ಸುಧಾಕರ್ 
ರಾಜ್ಯ

ಮುಂದಿನ 2-3 ದಿನಗಳಲ್ಲಿ ಎಲ್ಲಾ ವೈದ್ಯರಿಗೂ ರಿಸ್ಕ್ ಭತ್ಯೆ ಪಾವತಿ: ಸಚಿವ ಡಾ. ಕೆ.ಸುಧಾಕರ್

ಮುಂದಿನ ಎರಡು-ಮೂರು ದಿನಗಳಲ್ಲಿ ಎಲ್ಲಾ ವೈದ್ಯರಿಗೂ ರಿಸ್ಕ್ ಭತ್ಯೆ ಪಾವತಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು: ಮುಂದಿನ ಎರಡು-ಮೂರು ದಿನಗಳಲ್ಲಿ ಎಲ್ಲಾ ವೈದ್ಯರಿಗೂ ರಿಸ್ಕ್ ಭತ್ಯೆ ಪಾವತಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಕೋವಿಡ್ ರಿಸ್ಕ್ ಭತ್ಯೆ ಪಾವತಿ ವಿಳಂಬದ ಕುರಿತು ವಿಕ್ಟೋರಿಯಾ ಆಸ್ಪತ್ರೆ ಬಳಿ ನಡೆದ ಪ್ರತಿಭಟನೆ ತಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮೆಡಿಕಲ್ ಕಾಲೇಜುಗಳಿಗೆ ರಿಸ್ಕ್ ಭತ್ಯೆಯ ಒಟ್ಟು 73 ಕೋಟಿ ರೂಪಾಯಿ ಮೊತ್ತದ ಮಂಜೂರು ಪ್ರಕ್ರಿಯೆಗಳು ಇಂದು ಪೂರ್ಣಗೊಳ್ಳಲಿವೆ ಎಂದು ಅವರು ತಿಳಿಸಿದ್ದಾರೆ.

ಮುಂದಿನ ಎರಡು ಮೂರು ದಿನಗಳಲ್ಲಿ ರಿಸ್ಕ್ ಭತ್ಯೆಯನ್ನು ಎಲ್ಲಾ ವೈದ್ಯರಿಗೂ ಪಾವತಿಸಲಾಗುವುದು, ಆದ್ದರಿಂದ ಈ ಸಂದರ್ಭದಲ್ಲಿ ಪ್ರತಿಭಟನೆ ಹಿಂಪಡೆದು ಕರ್ತವ್ಯಕ್ಕೆ ಮರಳಬೇಕು ಎಂದು ಟ್ವೀಟ್ ನಲ್ಲಿ ಕೋರಿದ್ದಾರೆ. 

ಹೊಸ ಕೋವಿಡ್ ತಳಿ ಜನತೆಯಲ್ಲಿ ತಲ್ಲಣ ಮೂಡಿಸಿರುವಾಗಲೇ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರದಿಂದಾಗಿ ಹೊರ ರೋಗಿಗಳಿಗೆ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ದೊರಕದೆ ಪರದಾಡುವಂತಾಯಿತು. ಸರ್ಕಾರ ಕೊಟ್ಟ ಮಾತಿನಂತೆ ಕೋವಿಡ್ ಪರಿಹಾರ ಭತ್ಯೆಯನ್ನು ನಿಗದಿತ ಅವಧಿಯಲ್ಲಿ ಪಾವತಿ ಮಾಡುತ್ತಿಲ್ಲ ಎಂದು ವೈದ್ಯರು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT