ಸಾರ್ವಜನಿಕರಿಂದ ಅರ್ಜಿಗಳನ್ನು ಸಂಗ್ರಹಿಸುತ್ತಿರುವ ಚಿತ್ರ 
ರಾಜ್ಯ

ಬೆಂಗಳೂರು: ಡಾ. ಶಿವರಾಮ ಕಾರಂತ್ ಬಡಾವಣೆಯಲ್ಲಿನ 300 ಕಟ್ಟಡ ಸಕ್ರಮಗೊಳಿಸಲು ಸುಪ್ರೀಂ ಕೋರ್ಟ್ ಅನುಮತಿ

ಡಾ. ಶಿವರಾಮ್ ಕಾರಂತ್ ಬಡಾವಣೆಯಲ್ಲಿನ 300 ಕಟ್ಟಡಗಳನ್ನು ಸಕ್ರಮಗೊಳಿಸಲು ಹಾಗೂ ಅವುಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಲೇಔಟ್ ನೊಂದಿಗೆ ಸಂಯೋಜಿಸಲು ಸುಪ್ರೀಂಕೋರ್ಟ್ ಆದೇಶ ನೀಡಿದೆ

ಬೆಂಗಳೂರು: ಡಾ. ಶಿವರಾಮ್ ಕಾರಂತ್ ಬಡಾವಣೆಯಲ್ಲಿನ 300 ಕಟ್ಟಡಗಳನ್ನು ಸಕ್ರಮಗೊಳಿಸಲು ಹಾಗೂ ಅವುಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಲೇಔಟ್ ನೊಂದಿಗೆ ಸಂಯೋಜಿಸಲು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಇದರಿಂದಾಗಿ 300 ಮನೆ ಮಾಲೀಕರಿಗೆ ದೊಡ್ಡ ನಿರಾಳ ಸಿಕ್ಕಂತಾಗಿದೆ. ಇದು ಸಕ್ರಮಗೊಳ್ಳುತ್ತಿರುವ ಮೊದಲ ಹಂತವಾಗಿದ್ದು, ಸಕ್ರಮ ಬಯಸುತ್ತಿರುವ 1,418 ಅರ್ಜಿದಾರರಲ್ಲೂ ವಿಶ್ವಾಸ ಮೂಡಿದೆ. 

 ಕೋರ್ಟ್ ನೇಮಿಸಿರುವ ನ್ಯಾಯಮೂರ್ತಿ ಎ. ವಿ. ಚಂದ್ರಶೇಖರ್  ನೇತೃತ್ವದ ಸಮಿತಿ ಇತ್ತೀಚಿಗೆ ಎರಡು ವರದಿಗಳನ್ನು ಸಲ್ಲಿಸಿದ ನಂತರ ನವೆಂಬರ್ 25 ಗುರುವಾರದಂದು  ಸುಪ್ರೀಂಕೋರ್ಟ್ ಈ ಆದೇಶ ನೀಡಿದೆ. ಬಿಡಿಎ, ಕರ್ನಾಟಕ ಸರ್ಕಾರ ಮತ್ತಿತರರ ನಡುವಿನ ಕೇಸ್ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಮತ್ತು ಸಂಜೀವ್ ಖನ್ನಾ ಅವರು ಈ ತೀರ್ಪು ನೀಡಿದ್ದಾರೆ. 

 ಕ್ರಮವಾಗಿ ನವೆಂಬರ್ 10 ಮತ್ತು ನವೆಂಬರ್ 23 ರಂದು ಸಮಿತಿ ನೀಡಿದ್ದ ಮೂರು ಮತ್ತು ನಾಲ್ಕನೇ ವರದಿ ಶಿಫಾರಸ್ಸಿನ ಆಧಾರದ ಮೇಲೆ ಈ ಆದೇಶ ನೀಡಿರುವುದಾಗಿ ಕೋರ್ಟ್ ಹೇಳಿದೆ.  ನವೆಂಬರ್ 26, 2014 ಮತ್ತು ಆಗಸ್ಟ್ 3, 2018 ರ ನಡುವೆ ಲೇಔಟ್‌ನಲ್ಲಿ ಆಗಿರುವ ನಿರ್ಮಾಣಗಳ ಕಾನೂನುಬದ್ಧತೆ ಉದ್ದೇಶದಿಂದ ನ್ಯಾಯಾಲಯವು ಸಮಿತಿಯನ್ನು ನೇಮಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT