ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್ ಆತಂಕದ ನಡುವೆ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆ ಗಳ ಚುನಾವಣೆ

ರಾಜ್ಯದಲ್ಲಿ ಹೊಸ ಕೋವಿಡ್ -19 ಕ್ಲಸ್ಟರ್‌ಗಳ ರಚನೆಯ ಭೀತಿ ಮತ್ತು ಒಮಿಕ್ರಾನ್ ರೂಪಾಂತರದ ಆತಂಕದ ನಡುವೆ, ರಾಜ್ಯ ಚುನಾವಣಾ ಆಯೋಗವು ಸೋಮವಾರ 58 ನಗರ ಸ್ಥಳೀಯ ಸಂಸ್ಥೆಗಳಿಗೆ  ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಹೊಸ ಕೋವಿಡ್ -19 ಕ್ಲಸ್ಟರ್‌ಗಳ ರಚನೆಯ ಭೀತಿ ಮತ್ತು ಒಮಿಕ್ರಾನ್ ರೂಪಾಂತರದ ಆತಂಕದ ನಡುವೆ, ರಾಜ್ಯ ಚುನಾವಣಾ ಆಯೋಗವು ಸೋಮವಾರ 58 ನಗರ ಸ್ಥಳೀಯ ಸಂಸ್ಥೆಗಳಿಗೆ  ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದೆ.

ಡಿಸೆಂಬರ್ 27 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 30 ರಂದು ಮತಗಳ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.  ಚುನಾವಣೆ ನಡೆಯಲಿರುವ ಬಹುತೇಕ ನಗರ ಸ್ಥಳೀಯ ಸಂಸ್ಥೆಗಳು ಕಳೆದ ಮೂರ್ನಾಲ್ಕು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಉಳಿದಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ನಂತರ ಈ ಚುನಾವಣೆ ಮೂರನೇ ಪ್ರಮುಖ  ಪರೀಕ್ಷೆಯಾಗಿದೆ. ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪಕ್ಷವು ಕೇವಲ ಸಿಂದಗಿಯಲ್ಲಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಡಿಸೆಂಬರ್ 10 ರಂದು  ವಿಧಾನ ಪರಿಷತ್ತಿಗೆ  ನಡೆಯಲಿರುವ ದ್ವೈವಾರ್ಷಿಕ ಚುನಾವಣೆ, ತಮ್ಮ ತವರು ಜಿಲ್ಲೆ ಹಾವೇರಿಯಲ್ಲಿರುವ ಹಾನಗಲ್‌ನಲ್ಲಿ ಬಿಜೆಪಿಯ ಹೀನಾಯ ಸೋಲಿನ ನಂತರ ಪಕ್ಷದಲ್ಲಿ ತಮ್ಮ ಸ್ಥಾನವನ್ನು ಮರುಸ್ಥಾಪಿಸಲು ಬೊಮ್ಮಾಯಿ ಅವರಿಗೆ ಮತ್ತೊಂದು ಪರೀಕ್ಷೆಯಾಗಿದೆ.

ಇದೀಗ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಬೊಮ್ಮಾಯಿ ಅವರಿಗೆ ಮತ್ತೊಂದು ಸವಾಲಾಗಿದೆ. ಐದು ನಗರ ಪಾಲಿಕೆಗಳ 1,185 ವಾರ್ಡ್‌ಗಳು, 19 ಪಟ್ಟಣ ಪುರಸಭೆಗಳು ಮತ್ತು 34 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಅಲ್ಲದೆ, ಚಿಕ್ಕಮಗಳೂರು, ಸಿರಾ, ಗದಗ-ಬೆಟಗೇರಿ ಮತ್ತು ಹೊಸಪೇಟೆ ಸೇರಿದಂತೆ ನಾಲ್ಕು ನಗರ ಪಾಲಿಕೆಗಳಿಗೆ  ಅಥಣಿ, ಅಣ್ಣಿಗೇರಿ ಮತ್ತು ಬಂಕಾಪುರ ಪಟ್ಟಣ ಪುರಸಭೆಗಳ 209 ವಾರ್ಡ್ ಗಳಲ್ಲಿ ಚುನಾವಣೆ ನಡೆಯಲಿದೆ.

ಇದರೊಂದಿಗೆ ಬೆಂಗಳೂರು ನಗರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ, ಕೊಪ್ಪಳ, ಬಳ್ಳಾರಿ, ವಿಜಯನಗರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ವಿವಿಧ ಸಿಎಂಸಿ, ಟಿಎಂಸಿ ಮತ್ತು ಪಟ್ಟಣ ಪಂಚಾಯಿತಿಗಳಿಂದ 976 ವಾರ್ಡ್‌ಗಳಿಗೂ ಚುನಾವಣೆ  ನಡೆಯಲಿದೆ. ಚಾಮರಾಜನಗರ, ದಾವಣಗೆರೆ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಬೆಳಗಾವಿ, ವಿಜಯಪುರ, ಕಲಬುರಗಿ, ಹಾವೇರಿ ಮತ್ತು ಬಾಗಲಕೋಟೆಯ ವಿವಿಧ ಸಿಎಂಸಿ, ಟಿಎಂಸಿ ಮತ್ತು ಪಟ್ಟಣ ಪಂಚಾಯಿತಿಗಳಿಗೂ ಉಪಚುನಾವಣೆ ನಡೆಯಲಿದೆ.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತ ಸರಣಿ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನಿರ್ದೇಶನದ ನಂತರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿದೆ. ರಾಜ್ಯ ಸರ್ಕಾರ ನವೆಂಬರ್ 27 ರಂದು ಈ ವಾರ್ಡ್‌ಗಳಿಗೆ ಮೀಸಲಾತಿ ಪ್ರಕಟಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT