ಸಾಂದರ್ಭಿಕ ಚಿತ್ರ 
ರಾಜ್ಯ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಡಿಸೆಂಬರ್ 3ರ ವರೆಗೆ ಮಳೆಯ ಕಾಟ!

ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಸಾಧ್ಯತೆ ಕಾರಣದಿಂದ ಡಿಸೆಂಬರ್ 3 ವರೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ

ಬೆಂಗಳೂರು: ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಸಾಧ್ಯತೆ ಕಾರಣದಿಂದ ಡಿಸೆಂಬರ್ 3 ವರೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಯಲ್ಲಿ ನ. 30ರಿಂದ ಡಿ. 3ರವರೆಗೆ ಮಳೆಯಾಗುವ ಸಂಭವವಿದೆ.

ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಡಿ.2ರಂದು ಹೊರತುಪಡಿಸಿ ಉಳಿದ ದಿನಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್