ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ಕೋವಿಡ್ ಕ್ಲಸ್ಟರ್ ಗಳ ಬಗ್ಗೆ ರಾಜ್ಯ ಸರ್ಕಾರ ವಿಶೇಷ ನಿಗಾ: ಮುಖ್ಯಮಂತ್ರಿ ಬೊಮ್ಮಾಯಿ

ಒಮಿಕ್ರಾನ್ ಹೊಸ ರೂಪಾಂತರಿ ಬಗ್ಗೆ ವಿಶ್ವದ ರಾಷ್ಟ್ರಗಳು ತಬ್ಬಿಬ್ಬುಗೊಂಡಿವೆ. ಈ ಮಧ್ಯೆ, ಹೊಸ ರೂಪಾಂತರಿಯಿಂದ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರ, ರಾಜ್ಯದಲ್ಲಿ ಯಾವ ರೀತಿಯ ಪರಿಣಾಮ ಉಂಟಾಗುತ್ತದೆ ಅನ್ನೋದರ ಬಗ್ಗೆ ತೀವ್ರ ನಿಗಾ ಇರಿಸಿದ್ದೇವೆ ಅಂತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು:  ಒಮಿಕ್ರಾನ್ ಹೊಸ ರೂಪಾಂತರಿ ಬಗ್ಗೆ ವಿಶ್ವದ ರಾಷ್ಟ್ರಗಳು ತಬ್ಬಿಬ್ಬುಗೊಂಡಿವೆ. ಈ ಮಧ್ಯೆ, ಹೊಸ ರೂಪಾಂತರಿಯಿಂದ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರ, ರಾಜ್ಯದಲ್ಲಿ ಯಾವ ರೀತಿಯ ಪರಿಣಾಮ ಉಂಟಾಗುತ್ತದೆ ಅನ್ನೋದರ ಬಗ್ಗೆ ತೀವ್ರ ನಿಗಾ ಇರಿಸಿದ್ದೇವೆ ಅಂತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನ ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ನಿಂದಾಗುವ ಪರಿಣಾಮದ ಬಗ್ಗೆ ರಾಜ್ಯ ಸರ್ಕಾರ ಗಮನಿಸುತ್ತಿದೆ. ಈಗಿರುವ ಡೆಲ್ಟಾ ರೂಪಂತರಿಯಿಂದಾಗಿ ಅಲ್ಲಲ್ಲಿ ಆಗಿರುವ ಕ್ಲಸ್ಟರ್ ಗಳನ್ನು ರಾಜ್ಯ ಸರ್ಕಾರ ನಿಭಾಯಿಸುತ್ತಿದೆ. ಎರಡು ಹಂತದ  ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ವೈಜ್ಞಾನಿಕವಾಗಿ ಹೊಸ ರೂಪಾಂತರಿ ಬಗ್ಗೆ ಹೆಚ್ಚಿನ ತನಿಖೆಗಾಗಿ ಎನ್ ಸಿ ಬಿ ಎಸ್ ಗೂ ಕಳುಹಿಸಿದ್ದೇವೆ ಎಂದರು. 

ವಿದೇಶಿ ಪ್ರಯಾಣಿಕರ ಬಗ್ಗೆ ಹೆಚ್ಚಿನ ನಿಗಾವಹಿಸಿದ್ದೇವೆ. ಟ್ರ್ಯಾಕಿಂಗ್, ಟ್ರೇಸಿಂಗ್, ಟೆಸ್ಟಿಂಗ್ ಮಾಡುತ್ತಿದ್ದೇವೆ. ವಿದೇಶಿ ಪ್ರಯಾಣಿಕರ ಸಂಪರ್ಕಕ್ಕೆ ಬಂದವರಿಗೂ ಇದು ಅನ್ವಯವಾಗಲಿದೆ. ಕ್ಲಸ್ಟರ್ ಗಳ ಬಗ್ಗೆ ವಿಶೇಷ ಮಾರ್ಗಸೂಚಿ ನೀಡಲಾಗಿದ್ದು, ಭಾಗವಹಿಸಿದ ಎಲ್ಲರನ್ನು ಟೆಸ್ಟ್ ಮಾಡಬೇಕು. 7ನೇ ದಿನದೊಳಗಾಗಿ ಮತ್ತೊಮ್ಮೆ ಪರೀಕ್ಷೆ ಮಾಡಬೇಕೆಂದು ಸೂಚಿಸಿದೇವೆ ಎಂದು ತಿಳಿಸಿದರು.

ಈ ಮಧ್ಯೆ ಕೋವಿಡ್ ಹೊಸ ರೂಪಾಂತರಿ ಕುರಿತಂತೆ ಸಚಿವರು ಇವತ್ತು ಸಭೆ ಮಾಡಲಿದ್ದಾರೆ. ಕೂಲಂಕುಷ ಚರ್ಚೆಯ ಬಳಿಕ, ವರದಿ ಪಡೆದು ನಾನು ಸಹ ಚರ್ಚೆ ನಡೆಸುತ್ತೇನೆ. ಲಾಕ್ ಡೌನ್ ಜಾರಿ ಮಾಡುವುದು ಊಹಾಪೋಹ. ಈ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ. ಜನಜೀವನ ಯಾವ ರೀತಿ ನಡೆಯುತ್ತಿದೆ ಅದೇ ರೀತಿ ನಡೆಯಬೇಕು. ಎಲ್ಲೆಲ್ಲಿ ಜನರು ಸೇರುತ್ತಾರೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಬೆಳಗಾವಿ ಅಧಿವೇಶನದಲ್ಲಿ ಕೋವಿಡ್ ಮಾರ್ಗಸೂಚಿಗಳು ಜಾರಿಯಲ್ಲಿರುತ್ತವೆ. ಸಂಘ ಸಂಸ್ಥೆಗಳು ಸಭೆ ನಡೆಸಿದರೂ ಅಗತ್ಯ ಕ್ರಮೈಕೊಗಳ್ಳಬೇಕು. ವಿದೇಶದಲ್ಲಿ ಹೊಸ ರೂಪಾಂತರಿ ಪತ್ತೆಯಾದ ನಂತರ ರಾಜ್ಯ ಸರ್ಕಾರ ಅತ್ಯಂತ ಕಟ್ಟೆಚ್ಚರ ವಹಿಸುತ್ತಿದೆ ಅಂತಾ ಸಿಎಂ ಬೊಮ್ಮಾಯಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT