ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ಕೋವಿಡ್ ಕ್ಲಸ್ಟರ್ ಗಳ ಬಗ್ಗೆ ರಾಜ್ಯ ಸರ್ಕಾರ ವಿಶೇಷ ನಿಗಾ: ಮುಖ್ಯಮಂತ್ರಿ ಬೊಮ್ಮಾಯಿ

ಒಮಿಕ್ರಾನ್ ಹೊಸ ರೂಪಾಂತರಿ ಬಗ್ಗೆ ವಿಶ್ವದ ರಾಷ್ಟ್ರಗಳು ತಬ್ಬಿಬ್ಬುಗೊಂಡಿವೆ. ಈ ಮಧ್ಯೆ, ಹೊಸ ರೂಪಾಂತರಿಯಿಂದ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರ, ರಾಜ್ಯದಲ್ಲಿ ಯಾವ ರೀತಿಯ ಪರಿಣಾಮ ಉಂಟಾಗುತ್ತದೆ ಅನ್ನೋದರ ಬಗ್ಗೆ ತೀವ್ರ ನಿಗಾ ಇರಿಸಿದ್ದೇವೆ ಅಂತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು:  ಒಮಿಕ್ರಾನ್ ಹೊಸ ರೂಪಾಂತರಿ ಬಗ್ಗೆ ವಿಶ್ವದ ರಾಷ್ಟ್ರಗಳು ತಬ್ಬಿಬ್ಬುಗೊಂಡಿವೆ. ಈ ಮಧ್ಯೆ, ಹೊಸ ರೂಪಾಂತರಿಯಿಂದ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರ, ರಾಜ್ಯದಲ್ಲಿ ಯಾವ ರೀತಿಯ ಪರಿಣಾಮ ಉಂಟಾಗುತ್ತದೆ ಅನ್ನೋದರ ಬಗ್ಗೆ ತೀವ್ರ ನಿಗಾ ಇರಿಸಿದ್ದೇವೆ ಅಂತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನ ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ನಿಂದಾಗುವ ಪರಿಣಾಮದ ಬಗ್ಗೆ ರಾಜ್ಯ ಸರ್ಕಾರ ಗಮನಿಸುತ್ತಿದೆ. ಈಗಿರುವ ಡೆಲ್ಟಾ ರೂಪಂತರಿಯಿಂದಾಗಿ ಅಲ್ಲಲ್ಲಿ ಆಗಿರುವ ಕ್ಲಸ್ಟರ್ ಗಳನ್ನು ರಾಜ್ಯ ಸರ್ಕಾರ ನಿಭಾಯಿಸುತ್ತಿದೆ. ಎರಡು ಹಂತದ  ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ವೈಜ್ಞಾನಿಕವಾಗಿ ಹೊಸ ರೂಪಾಂತರಿ ಬಗ್ಗೆ ಹೆಚ್ಚಿನ ತನಿಖೆಗಾಗಿ ಎನ್ ಸಿ ಬಿ ಎಸ್ ಗೂ ಕಳುಹಿಸಿದ್ದೇವೆ ಎಂದರು. 

ವಿದೇಶಿ ಪ್ರಯಾಣಿಕರ ಬಗ್ಗೆ ಹೆಚ್ಚಿನ ನಿಗಾವಹಿಸಿದ್ದೇವೆ. ಟ್ರ್ಯಾಕಿಂಗ್, ಟ್ರೇಸಿಂಗ್, ಟೆಸ್ಟಿಂಗ್ ಮಾಡುತ್ತಿದ್ದೇವೆ. ವಿದೇಶಿ ಪ್ರಯಾಣಿಕರ ಸಂಪರ್ಕಕ್ಕೆ ಬಂದವರಿಗೂ ಇದು ಅನ್ವಯವಾಗಲಿದೆ. ಕ್ಲಸ್ಟರ್ ಗಳ ಬಗ್ಗೆ ವಿಶೇಷ ಮಾರ್ಗಸೂಚಿ ನೀಡಲಾಗಿದ್ದು, ಭಾಗವಹಿಸಿದ ಎಲ್ಲರನ್ನು ಟೆಸ್ಟ್ ಮಾಡಬೇಕು. 7ನೇ ದಿನದೊಳಗಾಗಿ ಮತ್ತೊಮ್ಮೆ ಪರೀಕ್ಷೆ ಮಾಡಬೇಕೆಂದು ಸೂಚಿಸಿದೇವೆ ಎಂದು ತಿಳಿಸಿದರು.

ಈ ಮಧ್ಯೆ ಕೋವಿಡ್ ಹೊಸ ರೂಪಾಂತರಿ ಕುರಿತಂತೆ ಸಚಿವರು ಇವತ್ತು ಸಭೆ ಮಾಡಲಿದ್ದಾರೆ. ಕೂಲಂಕುಷ ಚರ್ಚೆಯ ಬಳಿಕ, ವರದಿ ಪಡೆದು ನಾನು ಸಹ ಚರ್ಚೆ ನಡೆಸುತ್ತೇನೆ. ಲಾಕ್ ಡೌನ್ ಜಾರಿ ಮಾಡುವುದು ಊಹಾಪೋಹ. ಈ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ. ಜನಜೀವನ ಯಾವ ರೀತಿ ನಡೆಯುತ್ತಿದೆ ಅದೇ ರೀತಿ ನಡೆಯಬೇಕು. ಎಲ್ಲೆಲ್ಲಿ ಜನರು ಸೇರುತ್ತಾರೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಬೆಳಗಾವಿ ಅಧಿವೇಶನದಲ್ಲಿ ಕೋವಿಡ್ ಮಾರ್ಗಸೂಚಿಗಳು ಜಾರಿಯಲ್ಲಿರುತ್ತವೆ. ಸಂಘ ಸಂಸ್ಥೆಗಳು ಸಭೆ ನಡೆಸಿದರೂ ಅಗತ್ಯ ಕ್ರಮೈಕೊಗಳ್ಳಬೇಕು. ವಿದೇಶದಲ್ಲಿ ಹೊಸ ರೂಪಾಂತರಿ ಪತ್ತೆಯಾದ ನಂತರ ರಾಜ್ಯ ಸರ್ಕಾರ ಅತ್ಯಂತ ಕಟ್ಟೆಚ್ಚರ ವಹಿಸುತ್ತಿದೆ ಅಂತಾ ಸಿಎಂ ಬೊಮ್ಮಾಯಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT