ರಾಜ್ಯ

ಬೆಂಗಳೂರು: 11ನೇ ಮಹಡಿಯಿಂದ ಬಿದ್ದು ಬಾಲಕ ದುರ್ಮರಣ

Nagaraja AB

ಬೆಂಗಳೂರು: ಆಟವಾಡುತ್ತಿದ್ದ ಬಾಲಕನೋರ್ವ ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. 

ರಾಜರಾಜೇಶ್ವರಿ ನಗರದ ಶೋಭಾ ವ್ಯಾಲಿ ಆಪಾರ್ಟ್ ಮೆಂಟ್ ನ 11ನೇ ಮಹಡಿಯಲ್ಲಿ ನಿನ್ನೆ ಸಂಜೆ ಆಟವಾಡುತ್ತಿದ್ದ ಬಾಲಕ ಗಗನ್ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವುದು  ತಡವಾಗಿ ಬೆಳಕಿಗೆ ಬಂದಿದೆ.

ಮನೆಯಲ್ಲಿ ಪೋಷಕರು ಇಲ್ಲದ ವೇಳೆ ಆಟವಾಡಲು ಬಂದ ಗಗನ್ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಸೆಕ್ಯೂರಿಟಿ ಗಾರ್ಡ್ ಬಾಲಕ ಬಿದ್ದ ಶಬ್ದ ಕೇಳಿ ಓಡಿ ಹೋಗಿ ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಗನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ರಾಜರಾಜೇಶ್ವರಿ ನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

SCROLL FOR NEXT