ಇಂದು ಬೆಳಗ್ಗೆ ಕಾವಾಡಿಗರು, ಮಾವುತರಿಗೆ ತಿಂಡಿ ಬಡಿಸಿ ತಾವು ಸೇವಿಸಿದ ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಶಾಸಕರು ಮತ್ತು ಜಿಲ್ಲಾಧಿಕಾರಿಗಳು 
ರಾಜ್ಯ

ಮೈಸೂರು ದಸರಾ: ಆನೆಗಳಿಗೆ ಭಾರ ಹೊರುವ ತಾಲೀಮು; ಮಾವುತರು, ಕಾವಾಡಿಗರಿಗೆ ಉಪಾಹಾರ ಕೂಟ;  ಸಚಿವರು, ಶಾಸಕರು ಭಾಗಿ

ದಸರಾ ಉತ್ಸವದಲ್ಲಿ ಚಾಮುಂಡಿ ದೇವಿಯ ವಿಗ್ರಹವನ್ನು ಹೊರುವ ಅಭಿಮನ್ಯು ಮತ್ತು ಇತರ ಆತರ ಆನೆಗಳಿಗೆ ಶುಕ್ರವಾರ ಭಾರ ಹೊರುವ ತಾಲೀಮು ಮೈಸೂರು ಅರಮನೆ ಆರವರಣದಲ್ಲಿ ಆರಂಭವಾಗಿದೆ.

ಮೈಸೂರು: ದಸರಾ ಉತ್ಸವದಲ್ಲಿ ಚಾಮುಂಡಿ ದೇವಿಯ ವಿಗ್ರಹವನ್ನು ಹೊರುವ ಅಭಿಮನ್ಯು ಮತ್ತು ಇತರ ಆತರ ಆನೆಗಳಿಗೆ ಶುಕ್ರವಾರ ಭಾರ ಹೊರುವ ತಾಲೀಮು ಮೈಸೂರು ಅರಮನೆ ಆರವರಣದಲ್ಲಿ ಆರಂಭವಾಗಿದೆ.

ಈ ಸಂದರ್ಭದಲ್ಲಿ ಇಂದು ಬೆಳಗ್ಗೆ ಅರಮನೆಯಲ್ಲಿ ಮಾವುತರಿಗೆ ಮತ್ತು ಕಾವಾಡಿಗರಿಗೆ ಉಪಾಹಾರವನ್ನು ಒದಗಿಸಲಾಯಿತು. ಮೈಸೂರು ಜಿಲ್ಲಾಡಳಿತ, ಕೆ ಆರ್ ಕ್ಷೇತ್ರದ ಶಾಸಕ ಎಸ್ ಎ ರಾಮದಾಸ್ ಉಪಾಹಾರ ಆತಿಥ್ಯವನ್ನು ಏರ್ಪಡಿಸಿದ್ದರು.

ಎಲ್ಲರಿಗೂ ಕೈಯಾರೆ ಉಪಾಹಾರಗಳನ್ನು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಶಾಸಕರು, ಜಿಲ್ಲಾಧಿಕಾರಿಗಳಾದ ಬಗಾದಿ ಗೌತಮ್ ತಿನಬಡಿಸಿದರು. ನಂತರ ಮಾವುತರು, ಕಾವಾಡಿಗರೊಂದಿಗೆ ಕುಳಿತು ಸಚಿವರು,  ಶಾಸಕರು ಸಹ ಉಪಾಹಾರ ಸೇವಿಸಿದರು. ಆನೆಗಳ ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರ ಕಾರ್ಯವನ್ನು ಪ್ರಶಂಸಿಸಿ ಅವರ ಯೋಗಕ್ಷೇಮ ವಿಚಾರಿಸಿದರು. 

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೌಂಟ್ ಡೌನ್ ಆರಂಭವಾಗಿದ್ದು ಇಂದಿನಿಂದ ನಾಲ್ಕೈದು ದಿನಗಳ ಕಾಲ ತೀವ್ರ ತಾಲೀಮು ಮೈಸೂರು ಅರಮನೆ ಆವರಣದಲ್ಲಿ ನಡೆಯಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT