ರಾಜ್ಯ

ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಕಾನೂನು: ಗೃಹ ಸಚಿವ ಆರಗ ಜ್ಞಾನೇಂದ್ರ

Lingaraj Badiger

ಹಾಸನ: ಮತಾಂತರದಿಂದ ರಾಜ್ಯದಲ್ಲಿ ಕೋಮು ಗಲಭೆ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶುಕ್ರವಾರ ತೀವ್ರ ಅಸಮಾಧಾನ  ಹೊರಹಾಕಿದ್ದಾರೆ. 

ಹಾಸನದ ಹಳೆಬೀಡಿನಲ್ಲಿ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಮಾತನಾಡಿದ ಗೃಹ ಸಚಿವರು, ಮತಾಂತರಕ್ಕೆ ಶಾಸಕ ಗೂಳಿಹಟ್ಟಿ ಶೇಖರ್ ಅವರ ಕುಟುಂಬವೇ ಒಳಗಾಗಿರುವುದು ನಿಜಕ್ಕೂ ವಿಪರ್ಯಾಸ ಮತಾಂತರ ನಿಷೇಧಕ್ಕೆ ಸೂಕ್ತ ಕಾಯಿದೆ ತರುವುದಾಗಿ ಹೇಳಿದರು. 

ಮತಾಂತರ ಮಾಡಿ ತಮ್ಮ ಸಂಖ್ಯೆ ಹೆಚ್ಚಿಸಿಕೊಳ್ಳುವುದು ಅಧರ್ಮ, ಹಿಂದೂ ಧರ್ಮ ಜಗತ್ತಿನಲಿಯೇ ಪಾವಿತ್ರ್ಯತೆ ಹೊಂದಿರುವಂತದ್ದು, ಮತಾಂತರದಿಂದ ರಾಜ್ಯಾದ್ಯಂತ ಕೋಮು ಗಲಭೆ ನಡೆಯುತ್ತಿದೆ ಎಂದು ಗೃಹ ಸಚಿವರು ಹೇಳಿದ್ದಾರೆ.

ಆರ್ ಎಸ್ ಎಸ್  ಅನ್ನು ಭಯೋತ್ಪಾದಕರಿಗೆ ಹೋಲಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಸಿದ್ದರಾಮಯ್ಯನವರಿಗೆ ತಾಲಿಬಾನ್ ಮತ್ತು ಆರ್ ಎಸ್ಎಸ್ ನಡುವಣ ವ್ಯತ್ಯಾಸ ಗೊತ್ತಾಗಿಲ್ಲ. ರಾಜಕೀಯ ಕಾರಣಕ್ಕಾಗಿ ಆರ್ಎಸ್ಎಸ್ ಅನ್ನು ವಿನಾಕಾರಣ ಎಳೆಯುತ್ತಿದ್ದಾರೆ. ಅವರಿಗೆ ಬೇರೆ ಅಸ್ತ್ರವಿಲ್ಲದೆ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಮೂದಲಿಸಿದರು. 

ದೇಶ ಮತ್ತು ವ್ಯಕ್ತಿ ಎಂದು ಬಂದಾಗ ಮೊದಲು ದೇಶದ ಪರ ನಿಲ್ಲಬೇಕು ಎಂದು ಆರ್​ಎಸ್​ಎಸ್​ ಹೇಳುತ್ತದೆ. ಈ ರೀತಿ ಹೇಳುವ ಸಂಸ್ಥೆ ಯಾವುದಾದರೂ ಇದ್ದರೆ ಅದು ಆರ್​ಎಸ್​ಎಸ್​ ಮಾತ್ರ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

SCROLL FOR NEXT