ಮಳೆಯಿಂದಾಗಿ ಕೊಳೆತಿರುವ ಈರುಳ್ಳಿ 
ರಾಜ್ಯ

ಕಲಬುರಗಿಯಲ್ಲಿ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿ

ಒಂದು ಎಕರೆಯಲ್ಲಿ ಈರುಳ್ಳಿ ಬೆಳೆಯಲು ಸುಮಾರು 50 ಸಾವಿರ ರು ಹಣ ಖರ್ಚು ಮಾಡಲಾಗಿತ್ತು. ಆದರೆ ಮಳೆಯ ಕಾರಣದಿಂದಾಗಿ ಎಲ್ಲಾ ಬೆಳೆಯೂ ನಷ್ಟವಾಗಿದೆ ಎಂದು ಕಲಬರುಗಿ ರೈತ ಬಾಬೂರಾವ್ ಎಂಬುವರು ಹೇಳಿದ್ದಾರೆ

ಕಲಬುರಗಿ: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಕಲಬುರಗಿ ಅಪಾರ ಪ್ರಮಾಣದ ಬೆಳೆ ಹಾನಿಗೊಳಗಾಗಿದೆ.

ಒಂದು ಎಕರೆಯಲ್ಲಿ ಈರುಳ್ಳಿ ಬೆಳೆಯಲು ಸುಮಾರು 50 ಸಾವಿರ ರು ಹಣ ಖರ್ಚು ಮಾಡಲಾಗಿತ್ತು. ಆದರೆ ಮಳೆಯ ಕಾರಣದಿಂದಾಗಿ ಎಲ್ಲಾ ಬೆಳೆಯೂ ನಷ್ಟವಾಗಿದೆ ಎಂದು ಕಲಬರುಗಿ ರೈತ ಬಾಬೂರಾವ್ ಎಂಬುವರು ಹೇಳಿದ್ದಾರೆ.

ಸರ್ಕಾರದಿಂದ ಇದುವರೆಗೂ ಯಾವುದೇ ನೆರವು ಸಿಕ್ಕಿಲ್ಲ, ಮಳೆಯಿಂದ ನಷ್ಟಕ್ಕೊಳಗಾದ ರೈತರ ಸಹಾಯಕ್ಕೆ ಸರ್ಕಾರ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಸುರಿದ ಅನಿರ್ಧಿಷ್ಟ ಮಳೆಯಿಂದಾಗಿ ಬೆಳೆ ನಾಶವಾಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಕಳೆದ ಎರಡು ತಿಂಗಳಿಂದ ಅತಿ ಹೆಚ್ಚು ಮಳೆಯಾಗುತ್ತಿದ್ದು, ಕಲಬುರಗಿಯಲ್ಲಿ ಸುಮಾರು 980 ಮಿಮಿ ಮಳೆ ಸುರಿದಿದೆ, ತಗ್ಗು ಪ್ರದೇಶಗಳಲ್ಲಿ ನೀರು ನಿಂತ ಕಾರಣ ಈರುಳ್ಳಿ ಕೊಳೆತು ಹೋಗಿದೆ ಎಂದು ಸಸ್ಯರೋಗ ಶಾಸ್ತ್ರ ವಿಭಾಗದ ವಿಜ್ಞಾನಿ ಜಹೀರ್ ಅಹ್ಮದ್ ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT