ಲಿಂಗಾಯತ ಶ್ರೀಗಳು 
ರಾಜ್ಯ

ಹೊಸ ಸಂಸತ್ ಭವನಕ್ಕೆ `ಅನುಭವ ಮಂಟಪ 'ಎಂದು ಹೆಸರಿಡಿ: ಕೇಂದ್ರಕ್ಕೆ ಲಿಂಗಾಯತ ಶ್ರೀಗಳ ಆಗ್ರಹ

ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ ಭವನಕ್ಕೆ `ಅನುಭವ ಮಂಟಪ 'ಎಂದು ಹೆಸರಿಡುವಂತೆ ಶುಕ್ರವಾರ ರಾಜ್ಯದ ಹಲವು ಲಿಂಗಾಯತ ಶ್ರೀಗಳು ಒತ್ತಾಯಿಸಿದ್ದಾರೆ.

ಬೆಳಗಾವಿ: ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ ಭವನಕ್ಕೆ `ಅನುಭವ ಮಂಟಪ 'ಎಂದು ಹೆಸರಿಡುವಂತೆ ಶುಕ್ರವಾರ ರಾಜ್ಯದ ಹಲವು ಲಿಂಗಾಯತ ಶ್ರೀಗಳು ಒತ್ತಾಯಿಸಿದ್ದಾರೆ.

ಇಂದು ಬೆಳಗಾವಿಯಲ್ಲಿ ಸಭೆ ಸೇರಿದ ಹಲವು ಪ್ರಸಿದ್ಧ ಲಿಂಗಾಯತ ಸ್ವಾಮಿಗಳು, ನವೀಕರಿಸಿದ ಬೆಳಗಾವಿ ರೈಲು ನಿಲ್ದಾಣಕ್ಕೆ ನಾಗನೂರು ಮಠದ ಶಿವಬಸವ ಸ್ವಾಮೀಜಿ ಎಂದು ಹೆಸರಿಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಶ್ರೀಗಳು, ಮಠದ ಭಕ್ತರ ಇಚ್ಛೆಯಂತೆ ಸಂಸತ್ ಭವನಕ್ಕೆ ಅನುಭವ ಮಂಟಪದ ಹೆಸರಿಡಲು ತಾವು ಬೇಡಿಕೆ ಇಟ್ಟಿದ್ದೇವೆ. ತಮ್ಮ ಬೇಡಿಕೆಯನ್ನು ಈಡೇರಿಸಲು ರಾಜ್ಯ ಸರ್ಕಾರ ಅದನ್ನು ಶಿಫಾರಸು ಮಾಡಬೇಕು ಎಂದು ಹೇಳಿದರು.

ನಾಗನೂರು ಮಠದ ಶಿವಬಸವ ಸ್ವಾಮೀಜಿಯವರ ಕೆಲಸಗಳನ್ನು ನೆನಪಿಸಿಕೊಂಡ ಗದಗ-ಡಂಬಳ ತೊಂಡತಾರ್ಯ ಮಠದ ಸಿದ್ದರಾಮ ಸ್ವಾಮಿಗಳು,  1932 ರಲ್ಲಿ ಬೆಳಗಾವಿಗೆ ಆಗಮಿಸಿದ ಶಿವಬಸವ ಸ್ವಾಮಿಗಳು ಬಡ ಮಕ್ಕಳಿಗೆ ಶಿಕ್ಷಣ, ಆಹಾರ ಮತ್ತು ಆಶ್ರಯ ನೀಡಿದರು. ಶಿಕ್ಷಣ ಕ್ಷೇತ್ರದಲ್ಲಿ ಶಿವಬಸವ ಸ್ವಾಮೀಜಿಯವರ ಕೊಡುಗೆ ಅಪಾರ. ಹೀಗಾಗಿ ಬೆಳಗಾವಿ ರೈಲ್ವೇ ನಿಲ್ದಾಣಕ್ಕೆ ಅವರ ಹೆಸರಿಡಬೇಕು ಎಂದು ಒತ್ತಾಯಿಸಿದರು.

ವಿವಿಧ ಲಿಂಗಾಯತ ಮಠಗಳ ಅನೇಕ ಸ್ವಾಮಿಗಳು ಈ ಸಂದರ್ಭದಲ್ಲಿ ಮಾತನಾಡಿದರು ಮತ್ತು ತಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ ಭವನಕ್ಕೆ `ಅನುಭವ ಮಂಟಪ 'ಎಂದು ಹೆಸರಿಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಸ್ವಾಮೀಜಿಗಳ ನಿಯೋಗ ಕರೆದುಕೊಂಡು ಹೋಗಲು ಸಿದ್ಧ ಎಂದು ಹೇಳಿದರು.

ಲಿಂಗಾಯತ ಶ್ರೀಗಳು ಹಾಗೂ ಸ್ಥಳೀಯ ಮುಖಂಡರು ಅಶೋಕ್ ಚಂದರಗಿ ಅವರ ನೇತೃತ್ವದಲ್ಲಿ ಹೊಸ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡುವಂತೆ ಪ್ರಧಾನಿ ಮೋದಿಗೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT