ಹತ್ಯೆಗೊಳಗಾದ ಯುವಕ ಮುಲ್ಲಾ 
ರಾಜ್ಯ

ಬೆಳಗಾವಿ: ಅನ್ಯ ಧರ್ಮದ ಯುವತಿಯೊಂದಿಗೆ ಪ್ರೇಮ, ಮುಸ್ಲಿಂ ಯುವಕನ ಹತ್ಯೆ

ಖಾನಪುರದ ರೈಲ್ವೆ ಹಳಿಯ ಮೇಲೆ  24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ.  

ಬೆಳಗಾವಿ: ಖಾನಪುರದ ರೈಲ್ವೆ ಹಳಿಯ ಮೇಲೆ  24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ.  

ಮೃತನನ್ನು ಅರ್ಬಾಜ್ ಅಫ್ತಾಬ್ ಮುಲ್ಲಾ ಎಂದು ಗುರುತಿಸಲಾಗಿದೆ.  ಈತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಐಪಿಸೆ ಸೆಕ್ಷನ್ 302ರ ಅಡಿಯಲ್ಲಿ ಹತ್ಯೆ ಪ್ರಕರಣ ದಾಖಲಿಸಲಾಗಿದೆ. ಆತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎಂಬ ಮಾಹಿತಿ ಆಧಾರದ ಮೇಲೆ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಲ್ಲಾ ಕೆಲಸಕ್ಕಾಗಿ ಪ್ರತಿದಿನ ಬೆಳಗಾವಿಯಿಂದ ರೈಲಿನಲ್ಲಿ ಓಡಾಡುತ್ತಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ. ಮುಲ್ಲಾ ಪ್ರೀತಿಸುತ್ತಿದ್ದ ಹುಡುಗಿ ಕಡೆಯವರು ಆತನನ್ನು ಕೊಲೆ ಮಾಡಿರುವುದಾಗಿ ಯುವಕನ ತಾಯಿ ನಜೀಮಾ ಶಾಯಿಕ್ ಆರೋಪಿಸಿದ್ದಾರೆ. 

ಹುಡುಗಿಯಿಂದ ಬೇರೆಯಾಗುವಂತೆ ಬಿಜ್ರೆ ಮತ್ತು ಮಹಾರಾಜ್ ಸೇರಿದಂತೆ ಕೆಲವು ಜನರು ಕೆಲ ದಿನಗಳಿಂದ ತನ್ನ ಮಗನಿಗೆ ಬೆದರಿಕೆ ಹಾಕುತ್ತಿದ್ದರು.ಯುವತಿಯನ್ನು ತಡೆಯುವಂತೆ ಆಕೆಯ ತಾಯಿಯೊಂದಿಗೂ ಮಾತನಾಡಿದ್ದೆ ಆದರೆ, ಮುಲ್ಲಾ ಹಾಗೂ ಯುವತಿ ಮಾತು ಕೇಳುತ್ತಿರಲಿಲ್ಲ ಎಂದು ಅವರು ತಿಳಿಸಿದ್ದಾರೆ.  ಪ್ರಾಥಮಿಕ ತನಿಖೆ ನಡೆಸಿದ ರೈಲ್ವೆ ಪೊಲೀಸರು, ಈ ವಿಚಾರವನ್ನು ಬೆಳಗಾವಿ ಜಿಲ್ಲಾ ಪೊಲೀಸರಿಗೆ ವರ್ಗಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT