ರೋಹಿತ್ ಚಕ್ರತೀರ್ಥ 
ರಾಜ್ಯ

ಚಕ್ರತೀರ್ಥರನ್ನು ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದು ಖಂಡನೀಯ- ಕಾಂಗ್ರೆಸ್ 

ರೋಹಿತ್ ಚಕ್ರತೀರ್ಥ ಅವರನ್ನು  ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿ ಮಾಡಿರುವುದನ್ನು ವಿರೋಧಿಸಿ ಆರಂಭವಾಗಿರುವ ಟ್ವಿಟ್ಟರ್ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಬೆಂಗಳೂರು: ರೋಹಿತ್ ಚಕ್ರತೀರ್ಥ ಅವರನ್ನು  ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿ ಮಾಡಿರುವುದನ್ನು ವಿರೋಧಿಸಿ ಆರಂಭವಾಗಿರುವ ಟ್ವಿಟ್ಟರ್ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಕನ್ನಡ ನಾಡು, ನುಡಿಯ ಬಗ್ಗೆ ಸದಾ ವಿಕೃತ ಅವಹೇಳನ ಮಾಡುತ್ತಿದ್ದ ಹಾಗೂ ನಾಡಗೀತೆಯನ್ನು ವಿಲಕ್ಷಣವಾಗಿ ತಿರುಚಿ ಅವಮಾನಿಸಿದ್ದ ವ್ಯಕ್ತಿಯನ್ನು ಸರ್ಕಾರ ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದು ಖಂಡನೀಯ ಎಂದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಕೂಡಲೇ ಆ ವಿಕೃತ ವ್ಯಕ್ತಿಯನ್ನು ಓಡಿಸಿ, ಅರ್ಹರನ್ನು ಕೂರಿಸುವಂತೆ ಒತ್ತಾಯಿಸಲಾಗಿದೆ. ಚಕ್ರತೀರ್ಥರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ನಡೆಯುತ್ತಿರುವ ಟ್ವೀಟರ್ ಅಭಿಯಾನಕ್ಕೆ ನನ್ನ ಬೆಂಬಲವಿದೆ ಎಂದು ಕೆಪಿಸಿಸಿ ವಕ್ತಾರೆ ಲಾವಣ್ಯ ಬಳ್ಳಾಲ್ ತಿಳಿಸಿದ್ದಾರೆ.

#SackRohithChakrathirtha #ನಾಡದ್ರೋಹಿ_ಚಕ್ರತೀರ್ಥನನ್ನ_ಕೆಳಗಿಳಿಸಿ ಹ್ಯಾಸ್ ಟ್ಯಾಗ್ ಬಳಸಿ ಟ್ವಿಟರ್ ಅಭಿಯಾನ ನಡೆಸಲಾಗುತ್ತಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT