ಮಹಿಳೆಯನ್ನು ಬಲಿ ತೆಗೆದುಕೊಂಡ ಶಾಸಕ ಎಂ.ಪಿ. ಕುಮಾರಸ್ವಾಮಿ ಕಾರು 
ರಾಜ್ಯ

ಹಾಸನ: ಶಾಸಕ ಎಂ.ಪಿ.ಕುಮಾರಸ್ವಾಮಿ ಕಾರು ಡಿಕ್ಕಿ; ಮಹಿಳೆ ಸಾವು

ಮೂಡಿಗೆರೆ ಶಾಸಕರ ಕಾರು ಚಲಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲಿ ಸಾವನ್ನಪ್ಪಿದ ದಾರುಣ ಘಟನೆ ಬೇಲೂರು ಪಟ್ಟಣದ ಹನುಮಂತನಗರದ ಬಳಿ ಇಂದು ನಡೆದಿದೆ.

ಹಾಸನ: ಮೂಡಿಗೆರೆ ಶಾಸಕರ ಕಾರು ಚಲಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲಿ ಸಾವನ್ನಪ್ಪಿದ ದಾರುಣ ಘಟನೆ ಬೇಲೂರು ಪಟ್ಟಣದ ಹನುಮಂತನಗರದ ಬಳಿ ಇಂದು ನಡೆದಿದೆ.

ಸಾವನ್ನಪ್ಪಿದವರು ಹನುಮಂತನಗರದ ನಿವಾಸಿ ಹೂವಮ್ಮ (58) ಎಂದು ಗುರುತಿಸಲಾಗಿದೆ. ಇವರ ಪುತ್ರ ತೀವ್ರ ಗಾಯಗೊಂಡಿದ್ದು ಆಸ್ಪ್ರತೆಗೆ ದಾಖಲು ಮಾಡಲಾಗಿದೆ. ಈ ದುರ್ಘಟನೆ ವೇಳೆ ಕಾರಿನಲ್ಲಿ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಪ್ರಯಾಣಿಸುತ್ತಿರಲಿಲ್ಲ ಎನ್ನಲಾಗಿದೆ. 

ಬೈಕ್ ಸವಾರ ಅನಿರೀಕ್ಷಿತವಾಗಿ ಪಕ್ಕಕ್ಕೆ ಬಂದಿದ್ದರಿಂದ ಅಪಘಾತ ಸಂಭವಿಸಿತು ಎಂದು ಚಾಲಕ ಪ್ರವೀಣ್ ಹೇಳಿದ್ದಾನೆ. ಚಾಲಕ ಪ್ರವೀಣ್ ನಿರ್ಲಕ್ಷ್ಯ ಚಾಲನೆಯಿಂದಲೇ ಅಪಘಾತ ಸಂಭವಿಸಿದೆ. ಘಟನೆ ವೇಳೆ ಚಾಲಕ ಮದ್ಯಪಾನ ಮಾಡಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

SCROLL FOR NEXT