ಹೈಕೋರ್ಟ್ 
ರಾಜ್ಯ

ರಾಜ್ಯಪಾಲರ ಹುದ್ದೆಗಾಗಿ ಲಂಚ ಪ್ರಕರಣ: ನಿವೃತ್ತ ನ್ಯಾ. ಇಂದ್ರಕಲಾ ವಿರುದ್ಧದ ತನಿಖೆ- ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ರಾಜ್ಯಪಾಲರ ಹುದ್ದೆ ಪಡೆಯಲು ನಿವೃತ್ತ ನ್ಯಾಯಮೂರ್ತಿ ಬಿ ಎಸ್‌ ಇಂದ್ರಕಲಾ ಲಂಚ ಪಾವತಿ ಮಾಡಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ತನಿಖೆ ನಡೆಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮನವಿ ಕುರಿತು ಕರ್ನಾಟಕ ಹೈಕೋರ್ಟ್‌ ಈಚೆಗೆ ಪೊಲೀಸರಿಗೆ ನೋಟಿಸ್‌ ಜಾರಿ ಮಾಡಿದ್ದು, ಪ್ರತಿಕ್ರಿಯಿಸುವಂತೆ ಆದೇಶಿಸಿದೆ.

ಬೆಂಗಳೂರು: ರಾಜ್ಯಪಾಲರ ಹುದ್ದೆ ಪಡೆಯಲು ನಿವೃತ್ತ ನ್ಯಾಯಮೂರ್ತಿ ಬಿ ಎಸ್‌ ಇಂದ್ರಕಲಾ ಲಂಚ ಪಾವತಿ ಮಾಡಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ತನಿಖೆ ನಡೆಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮನವಿ ಕುರಿತು ಕರ್ನಾಟಕ ಹೈಕೋರ್ಟ್‌ ಈಚೆಗೆ ಪೊಲೀಸರಿಗೆ ನೋಟಿಸ್‌ ಜಾರಿ ಮಾಡಿದ್ದು, ಪ್ರತಿಕ್ರಿಯಿಸುವಂತೆ ಆದೇಶಿಸಿದೆ.

“ಕಚೇರಿ ಆಕ್ಷೇಪಣೆಗಳನ್ನು ಬದಿಗೆ ಸರಿಸಲಾಗಿದೆ. ಹೆಚ್ಚುವರಿ ಸರ್ಕಾರಿ ವಕೀಲರಿಗೆ ಪ್ರತಿವಾದಿ 1, 2 & 3 (ಪೊಲೀಸ್‌) ಪರವಾಗಿ ನೋಟಿಸ್‌ ಪಡೆಯಲು ಆದೇಶಿಸಲಾಗಿದೆ. ನಾಲ್ಕನೇ ಪ್ರತಿವಾದಿಯಾದ ನಿವೃತ್ತ ನ್ಯಾ. ಇಂದ್ರಕಲಾ ಅವರಿಗೆ ತುರ್ತು ನೋಟಿಸ್‌ ಜಾರಿ ಮಾಡಲಾಗಿದೆ” ಎಂದು ನ್ಯಾ. ಕೃಷ್ಣ ದೀಕ್ಷಿತ್ ನೇತೃತ್ವದ ಏಕ ಸದಸ್ಯ ಪೀಠ ಆದೇಶ ಮಾಡಿದೆ. 

ನಿವೃತ್ತ ನ್ಯಾ. ಇಂದ್ರಕಲಾ ಅವರಿಂದ ಪಡೆದ ಲಿಖಿತ ಮಾಹಿತಿ ಆಧರಿಸಿ ಭಾರತೀಯ ದಂಡ ಸಂಹಿತೆ ಸೆಕ್ಷನ್ ಗಳಾದ 109 (ಕುಮ್ಮಕ್ಕು), 34 (ಸಾಮಾನ್ಯ ಉದ್ದೇಶ) ಮತ್ತು 420 (ವಂಚನೆ) ಅಡಿ ಪೊಲೀಸರು ದೂರು ದಾಖಲಿಸಿದ್ದಾರೆ. ಇಲ್ಲಿ ಯುವರಾಜ್ ಮತ್ತು ಪಾಪಯ್ಯ ಅವರನ್ನು ಕ್ರಮವಾಗಿ ಮೊದಲ ಮತ್ತು ಎರಡನೇ ಆರೋಪಿಗಳನ್ನಾಗಿಸಲಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಮಧ್ಯವರ್ತಿ, BJP ಮುಖಂಡನ ಬಂಧನ!

ಕಾವೇರಿ ನೀರಿನ ವಿವಾದ: ಕರ್ನಾಟಕದಿಂದ 9,000 ಕ್ಯೂಸೆಕ್ ನೀರು ಬಿಡುಗಡೆಯಾದರೂ, ಕೊರತೆ ಇದೆ-ತಮಿಳುನಾಡು; ಸೆ.15 ಕ್ಕೆ ಮತ್ತೆ ವಿಚಾರಣೆ

Nepal Floods: ‘ಕಲ್ಪನೆಗೂ ನಿಲುಕದ ದುರಂತ’..‘ಒಗ್ಗಟ್ಟಿನಿಂದ ಬಿಕ್ಕಟ್ಟು ಗೆಲ್ಲುತ್ತೇವೆ’: ನೇಪಾಳ ಪ್ರಧಾನಿ

ದೆಹಲಿ ಡೇ ಕೇರ್‌ನಲ್ಲಿ 3 ವರ್ಷದ ಮಗುವಿನ ಮೇಲೆ ಕ್ರೌರ್ಯ; ಕುರ್ಚಿಗೆ ಕಟ್ಟಿ ಹಾಕಿ ಭೀಕರ ಹಲ್ಲೆ, ಭಯಾನಕ Video ನೋಡಿ

ನೇಪಾಳದಲ್ಲಿ ಹಠಾತ್ ಪ್ರವಾಹ: ಕರ್ನಾಟಕದ 13 ಮಂದಿ ನಾಪತ್ತೆ; ಇನ್ನೂ ಸುಳಿವು ಸಿಕ್ಕಿಲ್ಲ ಎಂದ ಸಿಎಂ ಡಿಕೆ ಶಿವಕುಮಾರ್