ರಾಜ್ಯ

ಮಳೆಯಿಂದ ಉರುಳಿದ್ದ ಮರಕ್ಕೆ ಡಿಕ್ಕಿ ಹೊಡೆದು ಹೋಟೆಲ್ ಮಾಲೀಕ ಸಾವು!

Srinivas Rao BV

ಬೆಂಗಳೂರು: ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಮಳೆಯ ಪರಿಣಾಮ ಉರುಳಿದ್ದ ಮರಕ್ಕೆ ಡಿಕ್ಕಿ ಹೊಡೆದು ಹೋಟೆಲ್ ಮಾಲಿಕ ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಿಗ್ಗೆ 4.30ಕ್ಕೆ ನಡೆದಿದೆ. 

ಬಿಎಸ್ ನಾಗರಾಜ್ ಧನ್ಯ ಮೃತ ದುರ್ದೈವಿಯಾಗಿದ್ದು, ತಮ್ಮ ಹೊಟೇಲ್ ವಾದಿರಾಜ್ ಗೆ ತೆರಳುತ್ತಿದ್ದಾಗ ಈ ಘಟನೆ ವರದಿಯಾಗಿದೆ. ಕತ್ತಲಿದ್ದರಿಂದ ಧರೆಗುರುಳಿದ್ದ ಮರ ವಾಹನ ಸವಾರನಿಗೆ ಕಾಣಲಿಲ್ಲ. ಆದ್ದರಿಂದ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಜಯನಗರದ ಅಪೋಲೋ ಆಸ್ಪತ್ರೆಗೆ ಸೇರಿಸುವ ವೇಳೆಗೆ ಆತ ಮೃತಪಟ್ಟಿದ್ದಾರೆ. ಹೊಟೆಲ್ ಅಸೋಸಿಯೇಷನ್ ನ ಮಾಲಿಕರಾದ ಪಿಸಿರಾವ್ ಈ ಅಪಘಾತದ ಘಟನೆಯನ್ನು ದೃಢಪಡಿಸಿದ್ದಾರೆ. 

ಬಿಎಸ್ ನಾಗರಾಜ್ ಧನ್ಯ ಅವರ ತಲೆಗೆ ತೀವ್ರವಾದ ಗಾಯಗಳಾಗಿದ್ದರಿಂದ ಮೃತಪಟ್ಟಿದ್ದಾರೆ. ಬಿಎಸ್ ನಾಗರಾಜ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್ ಹಾಗೂ ಕರ್ನಾಟಕ ಹೊಟೇಲ್ ಅಸೋಸಿಯೇಷನ್ ನ ಮಾಜಿ ಕಾರ್ಯದರ್ಶಿಯಾಗಿದ್ದರು." ಬಿಬಿಎಂಪಿ ನೀಡಿರುವ ಮಾಹಿತಿಯ ಪ್ರಕಾರ ಕಂಟ್ರೋಲ್ ರೂಮ್ ಮಳೆಯಿಂದಾಗಿ ಮರಗಳು ಧರೆಗುರುಳಿರುವ 7 ಘಟನೆಗಳು ವರದಿಯಾಗಿದೆ.

SCROLL FOR NEXT