ನಿರ್ಮಾಣ ಹಂತದ ಕೊಳಚೆ ನೀರು ಸಂಸ್ಕರಣಾ ಘಟಕ 
ರಾಜ್ಯ

ಎಸ್ ಟಿಪಿಯಿಂದ ನಿವೇಶನ ಕಳೆದುಕೊಂಡವರಿಗೆ ಬಿಡಿಎನಿಂದ ಅದೇ ಬ್ಲಾಕ್ ನಲ್ಲಿ ಪರ್ಯಾಯ ಸೈಟ್ ಹಂಚಿಕೆ

ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಎರಡು ಬೃಹತ್ ಕೊಳಚೆ ನೀರು ಸಂಸ್ಕರಣಾ ಘಟಕ(ಎಸ್‌ಟಿಪಿ) ನಿರ್ಮಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಸದ್ದಿಲ್ಲದೆ ಜನರಿಗೆ ಹಂಚಿಕೆಯಾದ ನಿವೇಶನಗಳನ್ನು ಬಳಸಿಕೊಂಡಿದ್ದು,...

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಎರಡು ಬೃಹತ್ ಕೊಳಚೆ ನೀರು ಸಂಸ್ಕರಣಾ ಘಟಕ(ಎಸ್‌ಟಿಪಿ) ನಿರ್ಮಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಸದ್ದಿಲ್ಲದೆ ಜನರಿಗೆ ಹಂಚಿಕೆಯಾದ ನಿವೇಶನಗಳನ್ನು ಬಳಸಿಕೊಂಡಿದ್ದು, ಹಲವು ವರ್ಷಗಳ ನಂತರ ಬಿಡಿಎ ಅಂತಿಮವಾಗಿ ಈ ವಾರ ಈ 20x30 ಚದರ ಅಡಿ ಸೈಟ್ ಮಾಲೀಕರಿಗೆ ಪರ್ಯಾಯ ನಿವೇಶನಗಳನ್ನು ನೀಡಲು ನಿರ್ಧರಿಸಿದೆ.

ಅಧಿಸೂಚನೆಯೂ ಇಲ್ಲದೆ, ಚಲ್ಲಘಟ್ಟ ಮತ್ತು ಭೀಮನಕುಪ್ಪೆ ಗ್ರಾಮಗಳಲ್ಲಿ(ಬ್ಲಾಕ್ V ಮತ್ತು VI) ಬಿಡಿಎ ಒಟ್ಟು 65 ನಿವೇಶನಗಳನ್ನು ಎಸ್‌ಟಿಪಿ ನಿರ್ಮಿಸಲು ತೆಗೆದುಕೊಂಡಿತ್ತು. ಈ ಬ್ಲಾಕ್‌ಗಳಲ್ಲಿ ಈ ಹಿಂದೆ ಬೇರೆ ಬೇರೆ ಸ್ಥಳಗಳಲ್ಲಿ ಯೋಜಿಸಲಾಗಿದ್ದ ಈ ಘಟಕಗಳನ್ನು ಸ್ಥಳೀಯರ ಆಕ್ಷೇಪಣೆಯ ನಂತರ ಅಲ್ಲಿಗೆ ಸ್ಥಳಾಂತರಿಸಲಾಗಿದೆ.

ಎಸ್ ಟಿಪಿಯಿಂದಾಗಿ ನಿವೇಶನದ ಕಳೆದುಕೊಂಡವರಿಗೆ ಪರ್ಯಾಯ ಸೈಟ್‌ಗಳನ್ನು ಒದಗಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಬಿಡಿಎ ಕಾರ್ಯದರ್ಶಿ ವಿ ಆನಂದ್ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

"ಎಸ್‌ಟಿಪಿಯಿಂದಾಗಿ ಲೇಔಟ್‌ನ ಐದು ಮತ್ತು ಆರನೇ ಬ್ಲಾಕ್ ನಲ್ಲಿ ಒಟ್ಟು 65 ಹಂಚಿಕೆದಾರರು ತಮ್ಮ ಸೈಟ್‌ಗಳನ್ನು ಕಳೆದುಕೊಂಡಿದ್ದಾರೆ. ನಾವು ಈಗಾಗಲೇ ಸುಮಾರು ಎರಡು ತಿಂಗಳ ಹಿಂದೆ 36 ಸೈಟುಗಳನ್ನು ನೀಡಿದ್ದೇವೆ. ಉಳಿದ 29 ಸೈಟ್ ಗಳನ್ನು ಒಂದೆರಡು ದಿನಗಳಲ್ಲಿ ನೀಡಲಾಗುವುದು. ಅವರಿಗೆ ಈ ಹಿಂದೆ ನೀಡಿದ್ದ ಬ್ಲಾಕ್‌ನಲ್ಲಿಯೇ ನಿವೇಶನಗಳನ್ನು ನೀಡಲಾಗುವುದು ”ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT