ಆತ್ಮಹತ್ಯೆ ಮಾಡಿಕೊಂಡ ಶಂಕರ್ ಕುಟುಂಬಸ್ಥರು 
ರಾಜ್ಯ

ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣ: ಅಂದು ಮಗನಿಂದಲೇ ಕೊಲೆಯಾಗುತ್ತಿದ್ದೆ ಎಂದ ಶಂಕರ್

ಬ್ಯಾಡರಹಳ್ಳಿಯ ತಿಗಳರಪಾಳ್ಯದಲ್ಲಿ ಒಂದೇ ಕುಟುಂಬದ ಐವರು ಸಾವು ಪ್ರಕರಣ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಬಂಧಿತನಾಗಿರುವ ಹಲ್ಲೆಗೇರೆ ಶಂಕರ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಬೆಂಗಳೂರು: ಬ್ಯಾಡರಹಳ್ಳಿಯ ತಿಗಳರಪಾಳ್ಯದಲ್ಲಿ ಒಂದೇ ಕುಟುಂಬದ ಐವರು ಸಾವು ಪ್ರಕರಣ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಬಂಧಿತನಾಗಿರುವ ಹಲ್ಲೆಗೇರೆ ಶಂಕರ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ತನ್ನನ್ನು ಕೊಲೆ ಮಾಡಲು ಮಗ ಮಧುಸಾಗರ್ ಮುಂದಾಗಿದ್ದ ಎಂಬ ವಿಚಾರವನ್ನು ಪೊಲೀಸರ ಎದುರು ಶಂಕರ್ ಬಾಯ್ಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಸೆ.12 ರಂದು 10 ಲಕ್ಷ ಕೊಡ್ತೇನೆ ಬಾ ಎಂದು ಮಗ ಶಂಕರ್ ಗೆ ಮೆಸೇಜ್ ಮಾಡಿದ್ದನು. ಮೆಸೇಜ್‍ಗೆ ರಿಪ್ಲೈ ಮಾಡದಿದ್ದಾಗ ಮಧುಸಾಗರ್ ತನ್ನ ತಂದೆಗೆ 3 ಬಾರಿ ಕಾಲ್ ಮಾಡಿದ್ದ. ಕೊನೆ ಕರೆ ವೇಳೆ ಕೊಲೆ ಮಾಡುವುದಾಗಿ ಬೆದರಿಸಿದ್ದ. ಅಮ್ಮ-ಅಕ್ಕಂದಿರು ಆತ್ಮಹತ್ಯೆಗೆ ಶರಣಾದ ಹಿನ್ನೆಲೆಯಲ್ಲಿ ಅಪ್ಪನನ್ನು ಜೀವಂತವಾಗಿ ಉಳಿಸುವುದು ಬೇಡ ಎಂದು ತೀರ್ಮಾನಿಸಿದ್ದ. ಮಗನ ಮಾತು ನಂಬಿ ನಾನು ಮನೆಗೆ ಹೋಗಿದ್ದರೆ ಅಂದೇ ಕೊಲೆ ಆಗುತ್ತಿದ್ದೆ ಎಂದು ಹಲ್ಲೇಗೆರೆ ಶಂಕರ್ ಪೊಲೀಸರ ಮುಂದೆ ಹೇಳಿಕೆ ಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಶಂಕರ್ ಕೊಟ್ಟ ಈ ಮಾಹಿತಿಗೂ, ಸಿಕ್ಕ ಟೆಕ್ನಿಕಲ್ ಸಾಕ್ಷಿಗೂ ತಾಳೆಯಾಗುತ್ತಿರುವುದಾಗಿ ತಿಳಿದುಬಂದಿದೆ.

ಸೆ.17ರಂದು ಒಂದೇ ಕುಟುಂಬದ ಐವರ ದಾರುಣ ಸಾವು ಪ್ರಕರಣ ಬೆಳಕಿಗೆ ಬಂದಿತ್ತು.‌‌ ದುರ್ಘಟನೆಯಲ್ಲಿ ಶಂಕರ್ ಪತ್ನಿ ಭಾರತಿ, ಮಕ್ಕಳಾದ ಸಿಂಚನಾ, ಸಿಂಧೂರಾಣಿ, ಮಧುಸಾಗರ್ ಆತ್ಮಹತ್ಯೆ ಮಾಡಿಕೊಂಡರೆ 9 ತಿಂಗಳ ಹಸುಗೂಸನ್ನು ಆಕೆಯ ತಾಯಿ ಸಿಂಧೂರಾಣಿಯೇ ಕೊಲೆ ಮಾಡಿದ್ದಳು. ಸಾವಿಗೂ ಮುನ್ನ ಮಕ್ಕಳು ಬರೆದಿದ್ದ ಡೆತ್ ನೋಟ್​​​ನಲ್ಲಿ ಶಂಕರ್ ಹಾಗೂ ಅಳಿಯಂದಿರ ಕಿರುಕುಳದ ಬಗ್ಗೆ ಪ್ರಸ್ತಾಪಿಸಿದ್ದರು.

ಕುಟುಂಬಸ್ಥರ ಆತ್ಮಹತ್ಯೆಗೆ ಪರೋಕ್ಷ ಪ್ರಚೋದನೆ ನೀಡಿರುವ ಆರೋಪದಡಿ ಶಂಕರ್ ಹಾಗೂ ಇಬ್ಬರೂ ಅಳಿಯಂದಿರನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT