ಚಾಮುಂಡಿ ಬೆಟ್ಟ 
ರಾಜ್ಯ

ಮೈಸೂರು: ಚಾಮುಂಡಿ ಬೆಟ್ಟಕ್ಕೆ ಅಕ್ಟೋಬರ್ 7 ಮಧ್ಯಾಹ್ನದವರೆಗೆ ಸಾರ್ವಜನಿಕರಿಗೆ ನಿಷೇಧ

ಮಹಾಲಯ ಅಮಾವಾಸ್ಯೆ ಮತ್ತು ದಸರಾ ಉದ್ಘಾಟನೆ ಕಾರ್ಯಕ್ರಮ ಅಂಗವಾಗಿ ಮಂಗಳವಾರ ಅಂದರೆ ಅಕ್ಟೋಬರ್ 5ರ ಮುಂಜಾನೆಯಿಂದ ನಾಡಿದ್ದು 7, ಗುರುವಾರದ ಮಧ್ಯಾಹ್ನದವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. 

ಮೈಸೂರು: ಮಹಾಲಯ ಅಮಾವಾಸ್ಯೆ ಮತ್ತು ದಸರಾ ಉದ್ಘಾಟನೆ ಕಾರ್ಯಕ್ರಮ ಅಂಗವಾಗಿ ಮಂಗಳವಾರ ಅಂದರೆ ಅಕ್ಟೋಬರ್ 5ರ ಮುಂಜಾನೆಯಿಂದ ನಾಡಿದ್ದು 7ನೇ ತಾರೀಖು ಗುರುವಾರದ ಮಧ್ಯಾಹ್ನದವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. 

ಸಾರ್ವಜನಿಕರ ವಾಹನಗಳಿಗೂ ನಿಷೇಧ ಹೇರಲಾಗಿದ್ದು, ದಸರಾ ಉದ್ಘಾಟನೆ ಸಮಾರಂಭಕ್ಕೆ ಆಗಮಿಸುವವರಿಗೆ ಈ ನಿಷೇಧ ಅನ್ವಯವಾಗುವುದಿಲ್ಲ ಎಂದು ಮೈಸೂರು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

ಮೈಸೂರು ಅರಮನೆಯಲ್ಲಿ ಸರಳ ಆಚರಣೆ: ಕೋವಿಡ್-19 ಹಿನ್ನೆಲೆಯಲ್ಲಿ ಮೈಸೂರು ಅರಮನೆಯಲ್ಲಿ ಈ ಬಾರಿಯೂ ಶರನ್ನವರಾತ್ರಿ ಸಂದರ್ಭದಲ್ಲಿ ಪೂಜಾ ವಿಧಿಗಳನ್ನು ಕೇವಲ ಸಾಂಪ್ರದಾಯಿಕವಾಗಿ ನಡೆಸಲಾಗುತ್ತದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಚರಣೆಯಲ್ಲಿ ಸಾರ್ವಜನಿಕರು ಹಾಗೂ ಮಾಧ್ಯಮಗಳ ಭಾಗವಹಿಸುವಿಕೆ ಇರುವುದಿಲ್ಲ, ಕೋವಿಡ್ ಹರಡುವಿಕೆ ತಡೆ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ ಎಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT