ನರೇಗಾದಡಿ ಕೆಲಸ ಮಾಡುತ್ತಿರುವ ಮಹಿಳಾ ಕಾರ್ಮಿಕರು(ಸಂಗ್ರಹ ಚಿತ್ರ) 
ರಾಜ್ಯ

ಗದಗ: ಕಾರ್ಮಿಕರ ವಲಸೆ ತಡೆಯಲು ನರೇಗಾ ಅಧಿಕಾರಿಗಳ ಕ್ರಮ, ಗ್ರಾಮಸ್ಥರ ಉದ್ಯೋಗ ಆದ್ಯತೆ ಬಗ್ಗೆ ಮಾಹಿತಿ ಸಂಗ್ರಹ

ಗ್ರಾಮಸ್ಥರು ಉದ್ಯೋಗ ಅರಸಿ ಬೇರೆಡೆ ವಲಸೆ ಹೋಗುವುದನ್ನು ತಡೆಯಲು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಎಂಜಿಎನ್ ಆರ್ ಇಜಿಎ) ಜಾರಿಯ ಉಸ್ತುವಾರಿ ಅಧಿಕಾರಿಗಳು ಮನೆ-ಮನೆಗೆ ಹೋಗಿ ಗ್ರಾಮಸ್ಥರ ಆದ್ಯತೆಯ ಉದ್ಯೋಗದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಗದಗ: ಗ್ರಾಮಸ್ಥರು ಉದ್ಯೋಗ ಅರಸಿ ಬೇರೆಡೆ ವಲಸೆ ಹೋಗುವುದನ್ನು ತಡೆಯಲು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಎಂಜಿಎನ್ ಆರ್ ಇಜಿಎ) ಜಾರಿಯ ಉಸ್ತುವಾರಿ ಅಧಿಕಾರಿಗಳು ಮನೆ-ಮನೆಗೆ ಹೋಗಿ ಗ್ರಾಮಸ್ಥರ ಆದ್ಯತೆಯ ಉದ್ಯೋಗದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಅಧಿಕಾರಿಗಳ ಈ ನಡೆ ಹಲವರನ್ನು ಆಕರ್ಷಿಸಿದ್ದು, ಈ ಬಗ್ಗೆ ತಮ್ಮ ಸ್ನೇಹಿತರು ಮತ್ತು ಕುಟುಂಬಸ್ಥರಿಗೆ ಮಾಹಿತಿ ನೀಡುತ್ತಿದ್ದಾರೆ. ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಈ ಬಗ್ಗೆ ಗ್ರಾಮ ಪಂಚಾಯತ್ ಅಧಿಕಾರಿಗಳು ಒಂದು ಬಾಕ್ಸ್ ನ್ನು ಇರಿಸಿದ್ದು, ಗ್ರಾಮಸ್ಥರು ಅಕ್ಟೋಬರ್ 30ರೊಳಗೆ ತಮ್ಮ ಆದ್ಯತೆಯ ಉದ್ಯೋಗದ ಬಗ್ಗೆ ಚೀಟಿಯಲ್ಲಿ ಬರೆದು ಬಾಕ್ಸ್ ಒಳಗೆ ಹಾಕಬಹುದು. ಅದಾದ ಒಂದು ವರ್ಷದವರೆಗೆ ಉದ್ಯೋಗದ ಬಗ್ಗೆ ಅಧಿಕಾರಿಗಳು ಯೋಜನೆ ರೂಪಿಸುತ್ತಾರೆ.

ನರಗುಂದ ತಾಲ್ಲೂಕಿನ ದಿನಗೂಲಿ ನೌಕರ ಸುರೇಶ್ ಮೈಗೇರಿ ಈ ಬಗ್ಗೆ ಮಾತನಾಡಿ, ಇಂತಹ ಯೋಜನೆಗಳಿಂದ ನಮಗೆ ಕೆಲಸ ಸಿಗಬಹುದು ಎಂದು ಖುಷಿಯಾಗಿದ್ದೇವೆ. ನಮ್ಮ ಗ್ರಾಮದಲ್ಲಿಯೇ ನಮಗೆ ಕೆಲಸ ಸಿಕ್ಕಿದರೆ ಬೇರೆ ಜಿಲ್ಲೆಗಳು ಮತ್ತು ನಗರಗಳಿಗೆ ವಲಸೆ ಹೋಗುವುದನ್ನು ತಡೆಯಬಹುದು ಎಂದಿದ್ದಾರೆ.

 ಒಂದು ವರ್ಷದವರೆಗೆ ನಿರಂತರವಾಗಿ ಕೆಲಸ ಸಿಗುತ್ತದೆ ಎಂದು ಸುದ್ದಿ ಕೇಳಿ ಗೋವಾ, ಬೆಂಗಳೂರು ಮತ್ತು ಮಂಗಳೂರು ಕಡೆಗೆ ಹೋಗಿದ್ದ ಕೆಲವು ನೌಕರರು ಗ್ರಾಮಕ್ಕೆ ಹಿಂತಿರುಗಿ ಕೆಲಸಕ್ಕೆ ಅರ್ಜಿ ಹಾಕುತ್ತಿದ್ದಾರೆ. 

ಗದಗ ಜಿಲ್ಲಾ ಪಂಚಾಯತ್ ನ ಅಧಿಕಾರಿಯೊಬ್ಬರು ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಗ್ರಾಮಸ್ಥರು ಹಿಂತಿರುಗಬೇಕೆಂದೇ ನಾವು ಬಯಸುವುದು. ಇದೀಗ ಬಹುತೇಕ ಗ್ರಾಮಸ್ಥರಿಗೆ ನರೇಗಾ ಯೋಜನೆಯಡಿ ಕೆಲಸ ಸಿಕ್ಕಿದೆ. ಅಂತವರನ್ನು ಗ್ರಾಮದಲ್ಲಿ ಉಳಿಸಿಕೊಂಡು, ಬೇರೆಡೆಗೆ ವಲಸೆ ಹೋದವರನ್ನು ಕೂಡ ಗ್ರಾಮಕ್ಕೆ ವಾಪಸ್ ಮರಳುವಂತೆ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂ: ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವು

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಸಿಗದ ನಿರೀಕ್ಷಣಾ ಜಾಮೀನು: ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ ಭೈರತಿ ಬಸವರಾಜು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾತ್ರೋರಾತ್ರಿ ಶೋಧ; ಇತಿಹಾಸದಲ್ಲಿಯೇ ಮೊದಲ ಬಾರಿಗೆ 30 ಮೊಬೈಲ್ ಫೋನ್‌ಗಳು ವಶ!

ಚಳಿಗಾಲದ ಅಧಿವೇಶನ ಸಂಪನ್ನ: ಉತ್ತರ ಕರ್ನಾಟಕ ಅಭಿವೃದ್ಧಿಗೆ ಗಣನೀಯ ಅನುದಾನ; ವಿಪಕ್ಷಗಳ ಗದ್ದಲದ ನಡುವೆಯೆ ಮಸೂದೆಗಳ ಅಂಗೀಕಾರ

SCROLL FOR NEXT