ದತ್ತ ಪೀಠ 
ರಾಜ್ಯ

ದತ್ತಪೀಠಕ್ಕೆ ಸರ್ಕಾರದಿಂದ ಹಿಂದೂ ಅರ್ಚಕರ ನೇಮಕ: ಸಚಿವ ಸುನೀಲ್ ಕುಮಾರ್

ದತ್ತಪೀಠಕ್ಕೆ ನಮ್ಮ ಸರ್ಕಾರ ಹಿಂದೂ ಅರ್ಚಕರನ್ನು ನೇಮಕ ಮಾಡಲಿದೆ ಎಂದು ಸಚಿವ ಸಚಿವ ಸುನಿಲ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ. 

ಚಿಕ್ಕಮಗಳೂರು: ದತ್ತಪೀಠಕ್ಕೆ ನಮ್ಮ ಸರ್ಕಾರ ಹಿಂದೂ ಅರ್ಚಕರನ್ನು ನೇಮಕ ಮಾಡಲಿದೆ ಎಂದು ಸಚಿವ ಸಚಿವ ಸುನಿಲ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ. 

ದತ್ತಪೀಠಕ್ಕೆ ಭೇಟಿ ಕೊಟ್ಟ ಬಳಿಕ ಪ್ರತಿಕ್ರಿಯಿಸಿದ ಅವರು, ದತ್ತಪೀಠದ ಹೋರಾಟದ ಮೂಲಕವೇ ನಾನು ಗುರುತಿಸಿಕೊಂಡಿದ್ದೇನೆ. ಹೈಕೋರ್ಟ್ ಹಿಂದೂಗಳ ಭಾವನೆಗಳಿಗೆ ಪರವಾದ ತೀರ್ಪನ್ನು ಕೊಟ್ಟಿದೆ. ನಾನು ಮಂತ್ರಿಯಾದ ಸಂದರ್ಭದಲ್ಲಿ ಈ ತೀರ್ಪು ನೀಡಿರುವುದು ನನ್ನ ಜೀವನದ ಯೋಗ. ಈ ಹಿನ್ನೆಲೆಯಲ್ಲಿ ಅತ್ಯಂತ ಸಂತೋಷದಿಂದ ದತ್ತಾತ್ರೇಯನ ದರ್ಶನ ಮಾಡಿದ್ದೇನೆ ಎಂದು ಅಭಿಪ್ರಾಯಪಟ್ಟರು.

ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ಹಿಂದೂಗಳ ವಿರುದ್ಧದ ನಿರ್ಣಯ ತೆಗೆದುಕೊಂಡಿತು. ಮುಜಾವರ್ ನೇಮಕ ಮಾಡಿ ಹಿಂದೂ ವಿರೋಧಿಯಾಗಿ ನಡೆದುಕೊಂಡಿತು. ಈಗ ನ್ಯಾಯಾಲಯ ನಮ್ಮ ಪರವಾದ ತೀರ್ಪನ್ನು ನೀಡಿದೆ.

ದತ್ತಪೀಠದಲ್ಲಿ ಮುಜಾವರ್ ಪೂಜೆ ಮಾಡೋದಲ್ಲ, ಹಿಂದೂ ಅರ್ಚಕರು ಪೂಜೆ ಮಾಡಬೇಕೆಂದು ಕೋರ್ಟ್ ಹೇಳಿದೆ. ಹಿಂದೂಗಳ ಭಾವನೆಗಳ ಪರವಾಗಿ ನಮ್ಮ ಸರ್ಕಾರ ನಿಲ್ಲುತ್ತದೆ ಎಂದು ತಿಳಿಸಿದರು.

ದತ್ತಾತ್ರೇಯ ಪೀಠ ಬೇರೆ, ನಾಗೇನಹಳ್ಳಿಯಲ್ಲಿರುವ ಬಾಬಾಬುಡನ್ ದರ್ಗಾ ಬೇರೆ. ಈ ವಿಚಾರ ದಾಖಲೆಗಳಲ್ಲಿ ಸಾಬೀತಾಗಿದೆ. ಅಲ್ಪಸಂಖ್ಯಾತ ಸಮುದಾಯದ ಜನರು ಹೈಕೋರ್ಟ್ ಆದೇಶವನ್ನು ಗೌರವಿಸಬೇಕು ಮತ್ತು ತಮ್ಮ ಆಚರಣೆಗಳನ್ನು ನಾಗೇನಹಳ್ಳಿಗೆ ಬದಲಾಯಿಸಬೇಕು, ದತ್ತಪೀಠದಲ್ಲಿ ಹಿಂದುಗಳ ಮೂಲಕವೇ ಪೂಜೆಯಾಗಬೇಕು ಎಂಬ ಹೈಕೋರ್ಟ್ ನಿರ್ದೇಶನ ಕೊಟ್ಟಿದೆ. ಮುಸಲ್ಮಾನರು ಕಣ್ಣು ತೆರೆದು ನೋಡಬೇಕು. ನಿಮ್ಮ ನಾಗೇನಹಳ್ಳಿಯ ದರ್ಗಾವನ್ನು ನೀವು ಅಭಿವೃದ್ಧಿ ಮಾಡಿ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT