ಕುಟುಂಬ ಸದಸ್ಯರನ್ನು ಕಳೆದುಕೊಂಡವರ ರೋದನ,, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿತ್ರ 
ರಾಜ್ಯ

ಬೆಳಗಾವಿ: ಮನೆ ಕುಸಿದು 7 ಮಂದಿ ದುರ್ಮರಣ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ  ಮನೆಗೋಡೆ ಕುಸಿದು ಒಂದೇ ಕುಟುಂಬದ ಏಳು ಮಂದಿ ದುರ್ಮರಣ ಹೊಂದಿದ್ದಾರೆ. 

ಬೆಳಗಾವಿ: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ  ಮನೆಗೋಡೆ ಕುಸಿದು ಒಂದೇ ಕುಟುಂಬದ ಏಳು ಮಂದಿ ದುರ್ಮರಣ ಹೊಂದಿದ್ದಾರೆ. 

ಮೃತರನ್ನು ಅರ್ಜುನ ಹನುಮಂತ ಖನಗಾಂವಿ (48) ಪತ್ನಿ ಸತ್ಯವ್ವ ಖನಗಾಂವಿ (45) ಪುತ್ರಿ ಲಕ್ಷ್ಮಿ ಖನಗಾಂವಿ (17) ಪೂಜಾ ಅರ್ಜುನ ಖನಗಾಂವಿ (8) ಗಂಗವ್ವ ಭೀಮಪ್ಪ ಖನಗಾಂವಿ (50) ಸವಿತಾ ಭೀಮಪ್ಪ ಖನಗಾಂವಿ (28) ಮತ್ತು ಕಾಶವ್ವ ವಿಠಲ ಕೊಳಪ್ಪನವರ (8) ಎಂದು ಗುರುತಿಸಲಾಗಿದೆ. ಐವರು ಸ್ಥಳದಲ್ಲಿ ಹಾಗೂ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಳೆಯ ಮನೆಯ ಚಾವಣಿ ತೆಗೆದು ಹೊಸದಾಗಿ ಹಾಕುವ ಸಿದ್ಧತೆ ಮಾಡಿಕೊಂಡಿದ್ದ ಮನೆಯವರು, ಪಕ್ಕದಲ್ಲಿ ಹಾಕಿದ ಶೆಡ್ ನಲ್ಲಿ ವಾಸಿಸುತ್ತಿದ್ದರು. ಮಳೆ ಬೀಳುತ್ತಿದ್ದ ವೇಳೆ ಪಕ್ಕದಲ್ಲಿದ್ದ ಶಿಥಿಲಗೊಂಡಿದ್ದ ಗೋಡೆ ಅವರ ಮೇಲೆ ಕುಸಿದು ಬಿದ್ದಿದೆ ಎಂದು  ತಿಳಿದುಬಂದಿದೆ. 

ಮನೆ ಕುಸಿತ ದುರಂತದಿಂದ ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವುದಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ, ಮೃತಪಟ್ಟ ವ್ಯಕ್ತಿಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ನಾಳೆ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ.  ಅಂತ್ಯಸಂಸ್ಕಾರಕ್ಕೆ ಎಲ್ಲ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಪರಿಹಾರದ ಹಣವನ್ನು ತಕ್ಷಣ ತಲುಪಿಸಲಾಗುವುದು, ಸರ್ಕಾರ ನಿಮ್ಮ ಜೊತೆಗಿದೆ. ಯಾವುದೇ ಕಾರಣಕ್ಕೂ ದೃತಿಗೆಡದಂತೆ ಧೈರ್ಯ ತುಂಬಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT