ರಿಕ್ಟರ್ ಮಾಪನ (ಸಂಗ್ರಹ ಚಿತ್ರ) 
ರಾಜ್ಯ

ಬಸವನ ಬಾಗೇವಾಡಿಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆ ದಾಖಲು

ವಿಜಯಪುರದ ಬಸವನಬಾಗೇವಾಡಿಯಲ್ಲಿ ಭೂಕಂಪನದ ಅನುಭವವಾಗಿದ್ದು, ಶಾಲೆ ನಡೆಯುತ್ತಿದ್ದಾಗಲೇ ಈ ಘಟನೆ ನಡೆದ ಕಾರಣ ಶಾಲಾಮಕ್ಕಳು ಭಯದಿಂದ ಹೊರಗೆ ಓಡಿ ಬಂದಿದ್ದಾರೆ.

ವಿಜಯಪುರ: ವಿಜಯಪುರದ ಬಸವನಬಾಗೇವಾಡಿಯಲ್ಲಿ ಭೂಕಂಪನದ ಅನುಭವವಾಗಿದ್ದು, ಶಾಲೆ ನಡೆಯುತ್ತಿದ್ದಾಗಲೇ ಈ ಘಟನೆ ನಡೆದ ಕಾರಣ ಶಾಲಾಮಕ್ಕಳು ಭಯದಿಂದ ಹೊರಗೆ ಓಡಿ ಬಂದಿದ್ದಾರೆ.

ಬಸವನಬಾಗೇವಾಡಿಯ ಮಸುಟಿ ಗ್ರಾಮದಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ಮಸುಟಿ ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಮಕ್ಕಳಿಗೂ ಕಂಪನದ ಅನುಭವವಾಗಿ ಭಯದಿಂದ ಶಾಲೆಯಿಂದ ಹೊರಗೆ ಓಡಿ ಬಂದಿದ್ದಾರೆ. 

ಇನ್ನು ಭೂಕಪಂನದ ಕುರಿತು ಸ್ಪಷ್ಟನೆ ನೀಡಿರುವ ಭೂಕಂಪನ ಮಾಪನ ಇಲಾಖೆ ಅಧಿಕಾರಿಗಳು ಗ್ರಾಮದ 10 ಕಿಮೀ ಆಳದಲ್ಲಿ 2.9 ತೀವ್ರತೆಯ ಕಂಪನ ಸಂಭವಿಸಿದೆ ಎಂದು ಹೇಳಿದ್ದಾರೆ.

ಬಾಗಲಕೋಟೆ, ವಿಜಯಪುರದಲ್ಲೂ ಭೂಕಂಪನ 
ಇನ್ನು ಇದಕ್ಕೂ ಮೊದಲು ಅಂದರೆ ಭಾನುವಾರ ರಾತ್ರಿ ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಭೂಕಂಪನದ ಅನುಭವಾಗಿತ್ತು. ಈ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ವಿಕ್ಷಣಾ ಕೇಂದ್ರ (KSNDMC) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. "ಕರ್ನಾಟಕದ ಗಡಿಯನ್ನು ಹಂಚಿಕೊಂಡಿರುವ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ. ಅಂತೆಯೇ ಕರ್ನಾಟಕದ ವಿಜಯಪುರ ಜಿಲ್ಲೆಗೆ ಸಂಬಂಧಿಸಿದಂತೆ, ರಾತ್ರಿ 11:47 ಕ್ಕೆ ಕಡಿಮೆ ಪ್ರಮಾಣದ ಕಂಪನ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದರು. 

ವಿಜಯಪುರನಗರ, ಬಸವನ ಬಾಗೇವಾಡಿ, ಟಿಕೋಟಾ, ಇಂಡಿ ಮತ್ತು ಸಿಂದಗಿಯ ಅನೇಕ ಪ್ರದೇಶಗಳಲ್ಲಿ ರಾತ್ರಿ 11:30 ರಿಂದ 12 ರ ನಡುವೆ ಭೂಕಂಪನ ಅನುಭವಿಸಿದ ಅನುಭವವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT