ರಿಕ್ಟರ್ ಮಾಪನ (ಸಂಗ್ರಹ ಚಿತ್ರ) 
ರಾಜ್ಯ

ಬಸವನ ಬಾಗೇವಾಡಿಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆ ದಾಖಲು

ವಿಜಯಪುರದ ಬಸವನಬಾಗೇವಾಡಿಯಲ್ಲಿ ಭೂಕಂಪನದ ಅನುಭವವಾಗಿದ್ದು, ಶಾಲೆ ನಡೆಯುತ್ತಿದ್ದಾಗಲೇ ಈ ಘಟನೆ ನಡೆದ ಕಾರಣ ಶಾಲಾಮಕ್ಕಳು ಭಯದಿಂದ ಹೊರಗೆ ಓಡಿ ಬಂದಿದ್ದಾರೆ.

ವಿಜಯಪುರ: ವಿಜಯಪುರದ ಬಸವನಬಾಗೇವಾಡಿಯಲ್ಲಿ ಭೂಕಂಪನದ ಅನುಭವವಾಗಿದ್ದು, ಶಾಲೆ ನಡೆಯುತ್ತಿದ್ದಾಗಲೇ ಈ ಘಟನೆ ನಡೆದ ಕಾರಣ ಶಾಲಾಮಕ್ಕಳು ಭಯದಿಂದ ಹೊರಗೆ ಓಡಿ ಬಂದಿದ್ದಾರೆ.

ಬಸವನಬಾಗೇವಾಡಿಯ ಮಸುಟಿ ಗ್ರಾಮದಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ಮಸುಟಿ ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಮಕ್ಕಳಿಗೂ ಕಂಪನದ ಅನುಭವವಾಗಿ ಭಯದಿಂದ ಶಾಲೆಯಿಂದ ಹೊರಗೆ ಓಡಿ ಬಂದಿದ್ದಾರೆ. 

ಇನ್ನು ಭೂಕಪಂನದ ಕುರಿತು ಸ್ಪಷ್ಟನೆ ನೀಡಿರುವ ಭೂಕಂಪನ ಮಾಪನ ಇಲಾಖೆ ಅಧಿಕಾರಿಗಳು ಗ್ರಾಮದ 10 ಕಿಮೀ ಆಳದಲ್ಲಿ 2.9 ತೀವ್ರತೆಯ ಕಂಪನ ಸಂಭವಿಸಿದೆ ಎಂದು ಹೇಳಿದ್ದಾರೆ.

ಬಾಗಲಕೋಟೆ, ವಿಜಯಪುರದಲ್ಲೂ ಭೂಕಂಪನ 
ಇನ್ನು ಇದಕ್ಕೂ ಮೊದಲು ಅಂದರೆ ಭಾನುವಾರ ರಾತ್ರಿ ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಭೂಕಂಪನದ ಅನುಭವಾಗಿತ್ತು. ಈ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ವಿಕ್ಷಣಾ ಕೇಂದ್ರ (KSNDMC) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. "ಕರ್ನಾಟಕದ ಗಡಿಯನ್ನು ಹಂಚಿಕೊಂಡಿರುವ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ. ಅಂತೆಯೇ ಕರ್ನಾಟಕದ ವಿಜಯಪುರ ಜಿಲ್ಲೆಗೆ ಸಂಬಂಧಿಸಿದಂತೆ, ರಾತ್ರಿ 11:47 ಕ್ಕೆ ಕಡಿಮೆ ಪ್ರಮಾಣದ ಕಂಪನ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದರು. 

ವಿಜಯಪುರನಗರ, ಬಸವನ ಬಾಗೇವಾಡಿ, ಟಿಕೋಟಾ, ಇಂಡಿ ಮತ್ತು ಸಿಂದಗಿಯ ಅನೇಕ ಪ್ರದೇಶಗಳಲ್ಲಿ ರಾತ್ರಿ 11:30 ರಿಂದ 12 ರ ನಡುವೆ ಭೂಕಂಪನ ಅನುಭವಿಸಿದ ಅನುಭವವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT