ಸಾಂದರ್ಭಿಕ ಚಿತ್ರ 
ರಾಜ್ಯ

ನಾಡಹಬ್ಬ ದಸರಾ, ದುರ್ಗಾ ಪೂಜೆ: ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ

ನಾಳೆಯಿಂದ ಹತ್ತು ದಿನಗಳ ಕಾಲ ನಾಡಹಬ್ಬ ದಸರಾ ಕಾರ್ಯಕ್ರಮ. ಎಲ್ಲೆಡೆ ದುರ್ಗಾ ದೇವಿಯ ಆರಾಧನೆ. ಈ ಸಂದರ್ಭದಲ್ಲಿ ಕೋವಿಡ್-19 ಸೋಂಕಿನ ಬಗ್ಗೆ ಎಚ್ಚರಿಕೆ ವಹಿಸಿ ಹಬ್ಬ ಆಚರಣೆ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಗರವಾಸಿಗಳಿಗೆ ಎಚ್ಚರಿಕೆ ನೀಡಿದೆ.

ಬೆಂಗಳೂರು: ನಾಳೆಯಿಂದ ಹತ್ತು ದಿನಗಳ ಕಾಲ ನಾಡಹಬ್ಬ ದಸರಾ ಕಾರ್ಯಕ್ರಮ. ಎಲ್ಲೆಡೆ ದುರ್ಗಾ ದೇವಿಯ ಆರಾಧನೆ. ಈ ಸಂದರ್ಭದಲ್ಲಿ ಕೋವಿಡ್-19 ಸೋಂಕಿನ ಬಗ್ಗೆ ಎಚ್ಚರಿಕೆ ವಹಿಸಿ ಹಬ್ಬ ಆಚರಣೆ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಗರವಾಸಿಗಳಿಗೆ ಎಚ್ಚರಿಕೆ ನೀಡಿದೆ.

ಮೂರ್ತಿಯ ಅಳತೆ: ಈ ಸಂಬಂಧ ಮಾರ್ಗಸೂಚಿಗಳನ್ನು ಬಿಬಿಎಂಪಿ ಪ್ರಕಟಿಸಿದ್ದು, ಅಕ್ಟೋಬರ್ 11ರಿಂದ 15ರವರೆಗೆ ಕೋವಿಡ್ ಮಾರ್ಗಸೂಚಿಯ ಪ್ರಕಾರ ದುರ್ಗಾ ಪೂಜೆಗಳನ್ನು ಆಚರಿಸಿ ಎಂದು ಹೇಳಲಾಗಿದೆ. ಮಾರ್ಗಸೂಚಿಯಂತೆ ನಗರದ ಯಾವುದೇ ಭಾಗದಲ್ಲಿ ನಗರವಾಸಿಗಳು 4 ಅಡಿಗಳಿಗಿಂತ ಹೆಚ್ಚು ಎತ್ತರದ ದುರ್ಗಾಮಾತೆಯ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ. ಮೂರ್ತಿ ಸ್ಥಾಪನೆ ಮಾಡುವ ಮೊದಲು ಸುತ್ತಮುತ್ತ ಸ್ವಚ್ಛಗೊಳಿಸಬೇಕು, ಪ್ರತಿ ವಾರ್ಡ್ ಗೆ ಒಂದು ಮೂರ್ತಿಯನ್ನು ಮಾತ್ರ ಪ್ರತಿಷ್ಠಾಪಿಸಲು ಅನುಮತಿ, ಸರಳವಾಗಿ ಪ್ರಾರ್ಥನೆ, ಪೂಜೆಗಳಿಗೆ ಅವಕಾಶ.

ಪ್ರಾರ್ಥನೆ, ಪೂಜೆ, ಪ್ರಸಾದ: ಪ್ರಾರ್ಥನೆ ಸಲ್ಲಿಕೆ ವೇಳೆ 50ಕ್ಕಿಂತ ಹೆಚ್ಚು ಜನರಿಗೆ ಅವಕಾಶವಿಲ್ಲ. ಪೂಜೆ-ಪುನಸ್ಕಾರದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪೂಜೆ ನಂತರ ಸಿಹಿ ತಿನಿಸು, ಹಣ್ಣುಗಳು, ಹೂವುಗಳ ವಿತರಣೆಗೆ ಅವಕಾಶವಿಲ್ಲ. 
ಭಕ್ತರ ದರ್ಶನ: ಒಂದು ಬಾರಿಗೆ 100ಕ್ಕಿಂತ ಹೆಚ್ಚು ಮಂದಿಗೆ ಪ್ರವೇಶಕ್ಕೆ ಅವಕಾಶವಿಲ್ಲ, ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚು ಮಂದಿ ಸ್ಥಳದಲ್ಲಿ ಜಮಾಯಿಸುವಂತಿಲ್ಲ.

ದೇವಿ ಮೂರ್ತಿ ವಿಸರ್ಜನೆ: ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಅಧಿಕ ಮಂದಿ ಸೇರುವುದಿಲ್ಲ, ಸಿಂಧೂರ ಖೇಲಾ ಎಂಬ ಆಟವನ್ನು ಹೆಚ್ಚು ಜನರು ಜಮಾಯಿಸಿ ಆಡುವಂತಿಲ್ಲ, 10 ಜನಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ, ಡಿಜೆ/ ಧಾಕ್/ಡ್ರಮ್ಸ್ ನ್ನು ವಿಸರ್ಜನೆ ವೇಳೆ ಬಳಸುವಂತಿಲ್ಲ. ಸಾರ್ವಜನಿಕ ಟ್ಯಾಂಕ್/ ವಿಸರ್ಜನೆ ಕೊಳದಲ್ಲಿ ಗುರುತಿಸಿ ವಲಯ ಜಂಟಿ ಆಯುಕ್ತರು ಮತ್ತು ಪೊಲೀಸರು ಅನುಮತಿ ನೀಡಬೇಕು.

ಸುರಕ್ಷತಾ ಕ್ರಮಗಳು: ಜನರು ಸ್ಯಾನಿಟೈಸರ್ ಬಳಸಿ, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT