ಸಿಎಂ ಬೊಮ್ಮಾಯಿ 
ರಾಜ್ಯ

ಬೆಂಗಳೂರಿನ ಜಲಾವೃತವಾಗುವ ಪ್ರದೇಶಗಳಿಗೆ ಶಾಶ್ವತ ಪರಿಹಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಳೆ ಬಂದಾಗ ಬೆಂಗಳೂರಿನ ಜಲಾವೃತವಾಗುವ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು: ಮಳೆ ಬಂದಾಗ ಬೆಂಗಳೂರಿನ ಜಲಾವೃತವಾಗುವ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮೈಸೂರು ಜಿಲ್ಲಾಡಳಿತದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಭಾರಿ ಮಳೆ ಬಂದಾಗ ಬೆಂಗಳೂರು ನಗರದಲ್ಲಿ ಅತ್ಯಂತ ತಗ್ಗುಪ್ರದೇಶ, ಕೆರೆಗಳ ಆವರಣಗಳ ಭಾಗ,ರಾಜಾಕಾಲುವೆ ಭಾಗಗಳು ಜಲಾವೃತವಾಗುತ್ತಿವೆ. ಮಳೆ ಬಂದಾಗ ಸಮಸ್ಯೆಗಳನ್ನು ಸರಿಪಡಿಸುವುದು ತಾತ್ಕಾಲಿಕ ಪರಿಹಾರವಾಗುತ್ತದೆ. ಆದ್ದರಿಂದ ಜಲಾವೃತ್ತವಾಗುವ ಪ್ರದೇಶಗಳಲ್ಲಿ ಶಾಶ್ವತ ಪರಿಹಾರವನ್ನು ನೀಡಲು ಪುನರ್ನಿರ್ಮಾಣ ಮತ್ತು ಪುರ್ನವಸತಿ ಕಾರ್ಯವಾಗಬೇಕು ಎಂದು ಅವರು ತಿಳಿಸಿದರು

ರಾಜಾಕಾಲುವೆಯಲ್ಲಿ ಹಾಗೂ ಕೆರೆ ಆವರಣಗಳು ಒತ್ತುವರಿಯಾಗಿ ನಿರ್ಮಾಣವಾದ ವಸತಿಪ್ರದೇಶಗಳ ಬಗ್ಗೆ ಸರ್ವೇ ಮಾಡಿ ಪುನರ್ವಸತಿ ಕಲ್ಪಿಸಲಾಗುವುದು. ದೀರ್ಘಕಾಲಿಕ ಹಾಗೂ ಶಾಶ್ವತ  ಪರಿಹಾರ ನೀಡಲು ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಸ್ತೆಗಳು ನಿರ್ಮಾಣದ ಅವಧಿ, ನಿರ್ವಹಣೆ, ದುರಸ್ತಿ, ಗುಣಮಟ್ಟ ಹಾಗೂ ಕಳಪೆ ರಸ್ತೆ ನಿರ್ಮಿಸಿದ ಗುತ್ತಿಗೆದಾರರ ಬಗ್ಗೆ ಸಂಪೂರ್ಣ ವರದಿ ನೀಡಲು ಟಾಸ್ಕ್ ಫೋರ್ಸ್ ನ್ನು ರಚಿಸಲಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ವೈಜ್ಞಾನಿಕವಾಗಿ ಆಗಬೇಕು. ಮಳೆಗಾಲವಾದ ನಂತರ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು.

ಚಾಮರಾಜನಗರ ಜಿಲ್ಲೆಯ ಹಿಂದುಳಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವುದು ನನ್ನ ಕರ್ತವ್ಯ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದು ತಿಳಿಸಿದರು.

ದಸರಾ ಉತ್ಸವವನ್ನು ಎಸ್ ಎಂ ಕೃಷ್ಣ ಉದ್ಘಾಟನೆ ಮಾಡಲಿದ್ದಾರೆ. ಒಬ್ಬ ಸಾಮಾನ್ಯ ನಾಗರಿಕನಾಗಿ ಈ ಬಾರಿಯ ದಸರಾ ಉತ್ಸವವನ್ನು ಮುನ್ನಡೆಸುತ್ತಿರುವುದು ನನಗೆ ಸಂತೋಷ ತಂದಿದೆ. ಕೋವಿಡ್ ನಿಂದಾಗಿ ಸರಳ ಹಾಗೂ ಸಾಂಪ್ರದಾಯಿಕವಾಗಿ ದಸರಾವನ್ನು ಆಚರಿಸಲಾಗುತ್ತಿದೆ. ಕನ್ನಡ ನಾಡು ಸುಭಿಕ್ಷವಾಗಿರಲೆಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!