ಲಕ್ನೋದಲ್ಲಿ ನಡೆದ ಸಮಾವೇಶದಲ್ಲಿ ಭೈರತಿ ಬಸವರಾಜ್ 
ರಾಜ್ಯ

ನಗರ ಮೂಲಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರಕ್ಕೆ 10 ಸಾವಿರ ಕೋಟಿ ರು. ಮನವಿ: ಭೈರತಿ ಬಸವರಾಜ್

ರಾಜ್ಯದ ಸಣ್ಣ ನಗರಗಳ ಅಭಿವೃದ್ಧಿಗಾಗಿ 10 ಸಾವಿರ ಕೋಟಿ ರೂ ಮನವಿ ಸಲ್ಲಿಸಿರುವುದಾಗಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. 

ಬೆಂಗಳೂರು: ರಾಜ್ಯದ ಸಣ್ಣ ನಗರಗಳ ಅಭಿವೃದ್ಧಿಗಾಗಿ 10 ಸಾವಿರ ಕೋಟಿ ರೂ ಮನವಿ ಸಲ್ಲಿಸಿರುವುದಾಗಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. 

ಪ್ರಧಾನಿ ನರೇಂದ್ರ ಮೋಗಿ ಅವರ ನೇತೃತ್ವದಲ್ಲಿ ಲಕ್ನೋದಲ್ಲಿ ನಡೆದ ಮೂರು ದಿನಗಳ ಸಮಾವೇಶದಲ್ಲಿ ಭೈರತಿ ಬಸವರಾಜ್ ಭಾಗವಹಿಸಿದ್ದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಕೂಡ ಭಾಗವಹಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದೆ, ಆದರೆ ಅವರ ಬಿಡುವಿಲ್ಲದ ವೇಳಾಪಟ್ಟಿಯ ಹಿನ್ನೆಲೆಯಲ್ಲಿ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಭೈರತಿ ಬಸವರಾಜ್ ದಿನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ರಾಜ್ಯದ ಮನವಿಯನ್ನು ಪ್ರಧಾನಿ ಕಾರ್ಯಾಲಯಕ್ಕೆ ತಿಳಿಸಿದ್ದಾರೆ. ಹಾಗೂ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಯನ್ನು ಭೇಟಿ ಮಾಡಿ. ಕರ್ನಾಟಕದ 75 ಪಟ್ಟಣಗಳನ್ನು   ಒಳಚರಂಡಿ ಮತ್ತು 60 ಪಟ್ಟಣಗಳ ಕುಡಿಯುವ ನೀರಿನ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿದೆ, ಕೇಂದ್ರ ಸಚಿವರು ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದ್ದಾರೆ.

ತಮ್ಮ ಪತ್ರದಲ್ಲಿ, ಸಚಿವ ಬಸವರಾಜ್ ಅವರು ಈ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮಾಡುವುದರಿಂದ ಸಣ್ಣ ಪಟ್ಟಣಗಳಿಂದ ಜನಸಂಖ್ಯೆಯು ಬೆಂಗಳೂರಿಗೆ ಹೋಗದಂತೆ ತಡೆಯಲು ಮಹತ್ವದ್ದಾಗಿದೆ. ಇದರಿಂದ ಬೆಂಗಳೂರು ನಗರವನ್ನು ಮತ್ತಷ್ಟು ದಟ್ಟಣೆ ಮಾಡುತ್ತದೆ ಎಂದು ಹೇಳಿದರು.

ಕುಡಿಯುವ ನೀರು ಯೋಜನೆಯನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಡಿಯಲ್ಲಿ ತೆಗೆದುಕೊಳ್ಳಲಾಗಿದೆ. 15 ನೇ ಹಣಕಾಸು ಆಯೋಗವು ಕುಡಿಯುವ ನೀರು ಮತ್ತು ನೈರ್ಮಲ್ಯವನ್ನು ರಾಷ್ಟ್ರೀಯ ಆದ್ಯತೆಯಾಗಿ ಗುರುತಿಸಿದೆ. ಕೊಳವೆಗಳು, ಪಂಪ್‌ಗಳು ಮತ್ತು ಶೇಖರಣಾ ಬಿಂದುಗಳ ಜಾಲವನ್ನು ಒದಗಿಸುವ ಕುಡಿಯುವ ನೀರಿನ ಯೋಜನೆಗೆ ಸುಮಾರು 4,000 ಕೋಟಿ ರೂಪಾಯಿಗಳು ಬೇಕಾಗುತ್ತವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT