ಚರಂಡಿ ಸ್ವಚ್ಛಗೊಳಿಸಿದ ಮೇಯರ್ 
ರಾಜ್ಯ

ದಾವಣಗೆರೆ: ಮಳೆಯಿಂದಾಗಿ ಸಂಚಾರ ಅಸ್ತವ್ಯಸ್ತ, ರಸ್ತೆಗಿಳಿದು ಚರಂಡಿ ಕ್ಲೀನ್ ಮಾಡಿದ ಮೇಯರ್

ನಗರದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆಗೆ ದಾವಣಗೆರೆಯ ಹಲವಾರು ತಗ್ಗು ಪ್ರದೇಶಗಳು ಮತ್ತು ರಸ್ತೆಗಳು ಜಲಾವೃತಗೊಂಡಿವೆ.

ದಾವಣಗೆರೆ: ನಗರದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆಗೆ ದಾವಣಗೆರೆಯ ಹಲವಾರು ತಗ್ಗು ಪ್ರದೇಶಗಳು ಮತ್ತು ರಸ್ತೆಗಳು ಜಲಾವೃತಗೊಂಡಿವೆ.

ದಾವಣಗೆರೆ ನಗರ ಪಾಲಿಕೆ ಮುಂಭಾಗದಲ್ಲಿರುವ ಈರುಳ್ಳಿ ಮಾರುಕಟ್ಟೆ, ರೈಲ್ವೆ ಅಂಡರ್‌ಪಾಸ್ ಜಲಾವೃತಗೊಂಡಿತ್ತು. ಹೀಗಾಗಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿ ನಿರ್ಬಂಧಿಸಲಾಗಿತ್ತು. ಈರುಳ್ಳಿ ಮಾರುಕಟ್ಟೆಯಲ್ಲಿ ಚರಂಡಿಯಲ್ಲಿ ಬೈಕ್ ಬಿದ್ದಿದ್ದು, ಸವಾರನಿಗೆ ಭಾರೀ ನೀರು ತುಂಬಿದ್ದ ಕಾರಣ ರಸ್ತೆ  ಗುರುತು ಪತ್ತೆಯಾಗಲಿಲ್ಲ. ಕೂಡಲೇ ಸ್ಥಳಕ್ಕೆ ಧಾವಿಸಿದ ಮೇಯರ್ ಎಸ್.ಟಿ ವಿರೇಶ್ ಚರಂಡಿ ಸ್ವಚ್ಛಗೊಳಿಸಿದ್ದಾರೆ.

ಇದಲ್ಲದೇ, ಶಂಕರ್ ವಿಹಾರ್ ಎಕ್ಸ್ ಟೆನ್ಸನ್ ಮತ್ತು ಎಸ್‌ಎಸ್‌ಎಂ ನಗರದಂತಹ ತಗ್ಗು ಪ್ರದೇಶಗಳಲ್ಲಿ ಮನೆಗಳ ಒಳಗೆ ನೀರು ಹರಿಯಿತು. ಒಳಚರಂಡಿಗಳು ತುಂಬಿ ಹರಿಯುತ್ತಿದ್ದಂತೆ ಕೆಲವು ಐಷಾರಾಮಿ ಕಾಲೋನಿಗಳಲ್ಲಿನ ನೆಲಮಹಡಿ ಮನೆಗಳಿಗೂ ನೀರು ನುಗ್ಗಿತ್ತು.

ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದಾವಣಗೆರೆ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಬೆಳೆಗಳು ಮತ್ತು ಆಸ್ತಿಗಳಿಗೆ ಸಾಕಷ್ಟು ಹಾನಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT