ಹಾಸನಾಂಬ ದೇವಾಲಯ 
ರಾಜ್ಯ

ಹಾಸನ: ಹತ್ತು ದಿನ ಹಾಸನಾಂಬ ದೇವಾಲಯ ಓಪನ್; ಈ ವರ್ಷವೂ ಸಾರ್ವಜನಿಕ ಪ್ರವೇಶಕ್ಕೆ ನಿಷೇಧ

ಈ ವರ್ಷ ಅಕ್ಟೋಬರ್ 28 ರಿಂದ ಹಾಸನದಲ್ಲಿನ ಪ್ರಸಿದ್ಧ ಹಾಸನಾಂಬ ದೇವಾಲಯ ಬಾಗಿಲು ತೆರೆಯಲಿದ್ದು, ಸರಳ ರೀತಿಯಲ್ಲಿ ಆಚರಣೆಗಳು ನಡೆಯಲಿವೆ.

ಹಾಸನ: ಈ ವರ್ಷ ಅಕ್ಟೋಬರ್ 28 ರಿಂದ ಹಾಸನದಲ್ಲಿನ ಪ್ರಸಿದ್ಧ ಹಾಸನಾಂಬ ದೇವಾಲಯ ಬಾಗಿಲು ತೆರೆಯಲಿದ್ದು, ಸರಳ ರೀತಿಯಲ್ಲಿ ಆಚರಣೆಗಳು ನಡೆಯಲಿವೆ.

ದಶಕಗಳಿಂದಲೂ ಪೂಜೆ ನಡೆಸುತ್ತಿರುವ ಮುಖ್ಯ ಆರ್ಚಕ ನಾಗರಾಜ್ ನೇತೃತ್ವದಲ್ಲಿನ ಆರ್ಚಕರ ಗುಂಪಿನಿಂದ ಸಾಂಪ್ರದಾಯಿಕ ಪೂಜಾ, ಕಾರ್ಯಕ್ರಮಗಳು ನಡೆಯಲಿವೆ. ಆದರೆ, ಕೋವಿಡ್- 19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಈ ವರ್ಷವೂ ಸಾರ್ವಜನಿಕರು ದೇವಾಲಯ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಹಾಸನಾಂಬ ಕಾರು ಆಚರಣೆ ಮತ್ತು ವಾರ್ಷಿಕ ಮೇಳಗಳನ್ನು ಕೂಡಾ ನಿಷೇಧಿಸಲಾಗಿದೆ.

ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸರಳ ರೀತಿಯ ಆಚರಣೆಗೆ ಕಂದಾಯ, ಪೊಲೀಸ್ ಮತ್ತು ಮುಜರಾಯಿ ಇಲಾಖೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವರ್ಶಕ್ಕೆ ಒಂದು ಬಾರಿ ಹಾಸನಾಂಬ ದೇವಾಲಯ ತೆರೆಯಲಿದ್ದು, ರಾಜ್ಯ ಸೇರಿದಂತೆ ವಿವಿಧೆಡೆಯಿಂದ ಅಪಾರ ಸಂಖ್ಯೆಯ ಭಕ್ತಾಧಿಗಳು ಆಗಮಿಸುತ್ತಾರೆ. ತಮ್ಮಗೆ ಒಳಿತು ಮಾಡುವಂತೆ  ಚಿನ್ನ, ಬೆಳ್ಳಿ, ಸೀರೆ, ಬಳೆ, ನಗದು ಸೇರಿದಂತೆ ಮತ್ತಿತರ ವಸ್ತುಗಳನ್ನು ಹರಕೆ ರೂಪದಲ್ಲಿ ಸಲ್ಲಿಸುತ್ತಾರೆ. ಪ್ರತಿವರ್ಷ 1 ಕೋಟಿ ಗೂ ಅಧಿಕ ಆದಾಯ ಬರುವ ರಾಜ್ಯದ ದೇವಾಲಯಗಳಲ್ಲಿ ಈ ದೇವಾಲಯ ಕೂಡಾ ಒಂದಾಗಿದೆ. 

ದೇವಾಲಯದ ಬಾಗಿಲು ತೆರೆಯುವ ದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ವಿಶೇಷ ಅತಿಥಿಯಾಗಿ ಆಹ್ವಾನಿಸಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಈ ವರ್ಷವೂ ಸಾರ್ವಜನಿಕರಿಗೆ ದೇವಾಲಯ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

10 ದಿನಗಳ ಕಾಲ ಸಂಪ್ರದಾಯ ಮತ್ತು ಆಚರಣೆಯಲ್ಲಿ ಯಾವುದೇ ರಾಜೀಯಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.  ಶಾಂತಿಯುತವಾಗಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT