ಬಸವರಾಜ ಬೊಮ್ಮಾಯಿ 
ರಾಜ್ಯ

ಮನೆ ಮಾಲೀಕನ ಯಡವಟ್ಟಿನಿಂದ ಬೀದಿ ಪಾಲು: ಬಾಡಿಗೆದಾರರಿಗೆ ನೆರವು ನೀಡುವಂತೆ ಸಿಎಂಗೆ ಮಾಜಿ ಎಂಎಲ್ ಸಿ ಮನವಿ

ಮನೆ ಮಾಲೀಕ ಮಾಡಿದ ತಪ್ಪಿನಿಂದಾಗಿ ಬೀದಿಗೆ ಬಿದ್ದಿರುವ 30 ಕುಟುಂಬಗಳಿಗೆ ನೆರವಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯಪ್ರವೇಶಿಸಬೇಕು ಎಂದು ಮಾಜಿ ಎಂಎಲ್ ಸಿ ರಮೇಶ್ ಬಾಬು ಮನವಿ ಮಾಡಿದ್ದಾರೆ.

ತುಮಕೂರು: ಮನೆ ಮಾಲೀಕ ಮಾಡಿದ ತಪ್ಪಿನಿಂದಾಗಿ ಬೀದಿಗೆ ಬಿದ್ದಿರುವ 30 ಕುಟುಂಬಗಳಿಗೆ ನೆರವಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯಪ್ರವೇಶಿಸಬೇಕು ಎಂದು ಮಾಜಿ ಎಂಎಲ್ ಸಿ ರಮೇಶ್ ಬಾಬು ಮನವಿ ಮಾಡಿದ್ದಾರೆ.

ತುಮಕೂರು ನಗರದ ಬನಶಂಕರಿ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಮಾಲೀಕ ಮಂಜುನಾಥ್‌ ಟಿ.ಎಲ್‌ ಸಾಲ ಹಿಂತಿರುಗಿಸದೇ ಇದ್ದಿದ್ದಕ್ಕೆ ಕೆನರಾ ಬ್ಯಾಂಕ್‌ ಮತ್ತು ಮಹಿಳಾ ಕೋ ಆಪರೇಟಿವ್‌ ಬ್ಯಾಂಕ್‌ ಅಧಿಕಾರಿಗಳು ರಾತ್ರಿ ಮನೆಗಳನ್ನು ಸೀಜ್‌ ಮಾಡಿದ್ದಾರೆ. ಮಾಲೀಕನ ಎಡವಟ್ಟಿನಿಂದ ಮಕ್ಕಳು, ವೃದ್ಧರು, ಮಹಿಳೆಯರೂ ಸೇರಿದಂತೆ ಬೀದಿಗೆ ಬರಬೇಕಾಗಿದೆ.

ಟಿಎಲ್ ಮಂಜುನಾಥ್‌ಗೆ ಸೇರಿದ 3 ಕಟ್ಟಡಗಳಲ್ಲಿ 35 ಮನೆಗಳಿದ್ದು 100 -120 ಮಂದಿ ವಾಸವಿದ್ದರು. ಅಧಿಕಾರಿಗಳು ರಾತ್ರೋರಾತ್ರಿ ಮನೆ ಸೀಜ್‌ ಮಾಡಿದ್ದರಿಂದ ಬಾಡಿಗೆದಾರರು ರಾತ್ರಿಯೇ ಮನೆ ಖಾಲಿ ಮಾಡಿ ಬೀದಿಗೆ ಬರಬೇಕಾಯಿತು.

ಮಂಗಳವಾರ ಸಂಜೆ, ಕಂದಾಯ ಅಧಿಕಾರಿಗಳ ಸಹಾಯದಿಂದ ಬ್ಯಾಂಕ್ ಅಧಿಕಾರಿಗಳು ಮನೆಗಳನ್ನು ವಶಪಡಿಸಿಕೊಂಡವು. ಮನೆ ಮಾಲೀಕ ಮಂಜುನಾಥ್ ಬ್ಯಾಂಕುಗಳಿಗೆ 1.5 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದ್ದು, ಮೂರು ಬಾರಿ ನೀಡಿದ ನೋಟಿಸ್‌ ನೀಡಿದರೂ ನಿರ್ಲಕ್ಷಿಸಿರುವುದಾಗಿ ವರದಿಯಾಗಿದೆ, ಮಾಲೀಕನ ಯಡವಟ್ಟಿನಿಂದ ಬಾಡಿಗೆದಾರರು ತೊಂದರೆಗೊಳಗಾಗಿದ್ದಾರೆ.

ಇದು ಬ್ಯಾಂಕುಗಳು ಮತ್ತು ಭೂಮಾಲೀಕನ ನಡುವಿನ ಸಮಸ್ಯೆಯಾಗಿರುವುದರಿಂದ, ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಯಾರೂ ಮಧ್ಯಪ್ರವೇಶಿಸಲಿಲ್ಲ. "ಬಾಡಿಗೆದಾರರು ಮತ್ತು ಭೂಮಾಲೀಕರು ಉಚ್ಚ   ನ್ಯಾಯಾಲಯವನ್ನು ಸಂಪರ್ಕಿಸಬೇಕು, ಬ್ಯಾಂಕುಗಳು SARFAESI ಕಾಯಿದೆ 2002 ರ ಅಡಿಯಲ್ಲಿ ಮನೆಗಳನ್ನು ಸೀಜ್ ಮಾಡಿಕೊಂಡಾಗ ನಾವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ" ಎಂದು ತುಮಕೂರು ಡಿಸಿ ವೈ.ಎಸ್ ಪಾಟೀಲ್ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT