ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣ: ತಮಿಳುನಾಡು ಮೂಲದ ಮೂವರು ಅಪರಾಧಿಗಳು- ವಿಶೇಷ ನ್ಯಾಯಾಲಯ ತೀರ್ಪು

ಜಿಲ್ಲಾ ನ್ಯಾಯಾಲಯ ಆವರಣದ ಶೌಚಾಲಯದಲ್ಲಿ ಐದು ವರ್ಷಗಳ ಹಿಂದೆ ಬಾಂಬ್ ಸ್ಫೋಟಿಸಿದ್ದ ಪ್ರಕರಣದಲ್ಲಿ ತಮಿಳುನಾಡು ಮೂಲದ ಮೂವರನ್ನು ತಪ್ಪಿತಸ್ಥರು ಎಂದು ನಗರದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಶೇಷ ನ್ಯಾಯಾಲಯ ಶುಕ್ರವಾರ ಘೋಷಿಸಿದೆ.

ಮೈಸೂರು: ನಗರದ  ಜಿಲ್ಲಾ ನ್ಯಾಯಾಲಯ ಆವರಣದ ಶೌಚಾಲಯದಲ್ಲಿ ಐದು ವರ್ಷಗಳ ಹಿಂದೆ ಬಾಂಬ್ ಸ್ಫೋಟಿಸಿದ್ದ ಪ್ರಕರಣದಲ್ಲಿ ತಮಿಳುನಾಡು ಮೂಲದ ಮೂವರನ್ನು ತಪ್ಪಿತಸ್ಥರು ಎಂದು ನಗರದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಶೇಷ ನ್ಯಾಯಾಲಯ ಶುಕ್ರವಾರ ಘೋಷಿಸಿದೆ.

ನಾಯ್ನರ್ ಅಬ್ಬಾಸ್ ಅಲಿ ಅಲಿಯಾಸ್ ಲಿಬ್ರಾರಿ ಅಬ್ಬಾಸ್, ಎಂ ಸ್ಯಾಮ್ಸನ್ ಕರೀಂ ರಾಜ ಅಲಿಯಾಸ್ ಅಬ್ದುಲ್ ಕರೀಂ ಮತ್ತು ಎಸ್ ದಾವೂದ್ ಸುಲೇಮಾನ್ ಅವರನ್ನು ಅಪರಾಧಿಗಳು ಎಂದು ಎನ್ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕಸನಪ್ಪ ನಾಯ್ಕ್ ತೀರ್ಪು ಪ್ರಕಟಿಸಿದ್ದಾರೆ.

ಮೈಸೂರು ಜಿಲ್ಲಾ ನ್ಯಾಯಾಲಯದ ಹಿಂದಿನ ಸಾರ್ವಜನಿಕ ಶೌಚಾಲಯದಲ್ಲಿ ಆರೋಪಿಗಳು ಬಾಂಬ್ ಸ್ಫೋಟಿಸಿರುವುದು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟಿದೆ. ಹಾಗಾಗಿ, ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ), ಭಾರತೀಯ ದಂಡ ಸಂಹಿತೆ ಮತ್ತು ಸ್ಫೋಟಕ ವಸ್ತುಗಳ ಕಾಯಿದೆ, ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯಿದೆಯಡಿ ಈ ಮೂವರನ್ನು ಅಪರಾಧಿಗಳಾದಿಗಳು ಎಂದು ತೀರ್ಮಾನಿಸಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದ್ದು, ಅಪರಾಧಿಗಳಿಗೆ ಅಕ್ಟೋಬರ್ 11ರಂದು ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿದೆ.

ಮೈಸೂರು ನಗರದ ಚಾಮರಾಜಪುರದಲ್ಲಿರುವ ಜಿಲ್ಲಾ ನ್ಯಾಯಾಲಯದ ಹಿಂಬದಿಯಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ 2016ರ ಆಗಸ್ಟ್ 1ರಂದು ಬಾಂಬ್ ಸ್ಫೋಟವಾಗಿತ್ತು. ಅದೇ ದಿನ ಮೈಸೂರಿನ ಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ಅನಾಮಧೇಯ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬಳಿಕ ಎನ್ಐಎ ತನಿಖೆ ಕೈಗತ್ತಿಕೊಂಡು ತಮಿಳುನಾಡು ಮೂಲದ ನಾಯ್ನರ್ ಅಬ್ಬಾಸ್ ಅಲಿ, ಎಂ ಸ್ಯಾಮ್ಸನ್ ಕರೀಂ ರಾಜ, ಎಸ್ ದಾವೂದ್ ಸುಲೇಮಾನ್ ಅವರನ್ನು 2017 ನವೆಂಬರ್ 27ರಂದು ಬಂಧಿಸಲಾಗಿತ್ತು. ಬಳಿಕ 2018ರ ಮೇ 25ರಂದು ಈ ಮೂವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದಲ್ಲಿ ಆರೋಪಿಯಾಗಿದ್ದ ಮೋಹಮದ್ ಆಯೂಬ್ ವಿರುದ್ಧದ ಆರೋಪವನ್ನು ಕರ್ನಾಟಕ ಹೈಕೋರ್ಟ್ ಕೈಬಿಟ್ಟಿತ್ತು. ಇನ್ನೊಬ್ಬ ಆರೋಪಿ ಶಂಶುದ್ದೀನ್ ಕರುವಾ ವಿರುದ್ಧದ ಆರೋಪಗಳನ್ನು ಎನ್ಐಎ ಅಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ಕೈಬಿಟ್ಟಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT