ಜಂಬೂ ಸವಾರಿ ತಾಲೀಮು 
ರಾಜ್ಯ

ಮೈಸರು ದಸರಾ: ಕ್ಯಾಪ್ಟನ್ ಅಭಿಮನ್ಯುವಿಗೆ ಜಂಬೂ ಸವಾರಿ ತಾಲೀಮು

ಈ ಬಾರಿಯ ನಾಡಹಬ್ಬ ದಸರಾಕ್ಕೆ ಅಕ್ಟೋಬರ್ 7 ರಂದು ರಾಜಕೀಯ ಮುತ್ಸದಿ ಎಸ್.ಎಂ. ಕೃಷ್ಣ ಅವರು ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಅವರಿಗೆ ಸಾಥ್ ನೀಡಿದ್ದರು. 

ಬೆಂಗಳೂರು: ಈ ಬಾರಿಯ ನಾಡಹಬ್ಬ ದಸರಾಕ್ಕೆ ಅಕ್ಟೋಬರ್ 7 ರಂದು ರಾಜಕೀಯ ಮುತ್ಸದಿ ಎಸ್.ಎಂ. ಕೃಷ್ಣ ಅವರು ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಅವರಿಗೆ ಸಾಥ್ ನೀಡಿದ್ದರು. 

ಇದೀಗ ಸಾಂಸ್ಕೃತಿಕ ಚಟುವಟಿಕೆಗಳು ಗರಿಗೆದರಿದ್ದು, ಈ ನಡುವೆ ವಿಜಯದಶಮಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿರುವ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಉಳಿದ ಗಜಪಡೆಯನ್ನು ನಿತ್ಯವೂ ಪ್ರಮುಖ ರಸ್ತೆಗಳಲ್ಲಿ ನಡೆಸಿ ಅಭ್ಯಾಸ ಮಾಡಿಸಲಾಗುತ್ತಿದೆ.

ವಿಶೇಷವಾಗಿ ಕ್ಯಾಪ್ಟನ್ ಅಭಿಮನ್ಯುವಿಗೆ ಜಂಬೂ ಸವಾರಿಯ ತಾಲೀಮು ನಡೆಸಲಾಗುತ್ತದೆ. ಇದು ಅಕ್ಟೋಬರ್ 13 ಅಥವಾ 14ರಂದು ನಡೆಯಬಹುದು ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಅಭಿಮನ್ಯುವಿಗೆ ಮರದ ಅಂಬಾರಿ ಹೊರಿಸಲಾಗುತ್ತದೆ. ಅರಮನೆ ಮುಂದೆ ಪುಷ್ಪಾರ್ಚನೆ ಮಾಡಿದ ನಂತರ ಮೆರವಣಿಗೆ ತಾಲೀಮು ಆರಂಭವಾಗುತ್ತದೆ. ಗಜಪಡೆ ಜೊತೆಗೆ ಮೈಸೂರಿನ ಮತ್ತೊಂದು ಪ್ರಮುಖ ಆಕರ್ಷಣೆಯಾದ ಅಶ್ವಪಡೆಯೂ ಸಾಥ್ ನೀಡಲಿದೆ.

ಈ ಮೆರವಣಿಗೆ ತಾಲೀಮು ಉಸ್ತುವಾರಿಯನ್ನು ನಗರ ಪೊಲೀಸ್ ಆಯುಕ್ತರು, ಹಿರಿಯ ಅರಣ್ಯಾಧಿಕಾರಿಗಳು, ಜಂಬೂ ಸವಾರಿಯ ಬಗ್ಗೆ ವಿಶೇಷ ಜ್ಞಾನ ಇರುವ ಹಿರಿಯರು ವಹಿಸುತ್ತಾರೆ. ಪ್ರತಿವರ್ಷವೂ ವಿಜಯದಶಮಿಗೆ ಮುನ್ನ ಅಂಬಾರಿ ಹೊರುವ ಆನೆಗೆ ಮರದ ಅಂಬಾರಿ ಹೊರಿಸಿ ಅಭ್ಯಾಸ ಮಾಡಿಸುವ ರೂಢಿ ನಡೆದು ಬಂದಿದೆ. ಈ ಸಂದರ್ಭದಲ್ಲಿ ಅಂಬಾರಿ ಹೊರುವ ಆನೆಯ ವರ್ತನೆಯನ್ನು ಅಧ್ಯಯನ ಮಾಡಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT