ಜಂಬೂ ಸವಾರಿ ತಾಲೀಮು 
ರಾಜ್ಯ

ಮೈಸರು ದಸರಾ: ಕ್ಯಾಪ್ಟನ್ ಅಭಿಮನ್ಯುವಿಗೆ ಜಂಬೂ ಸವಾರಿ ತಾಲೀಮು

ಈ ಬಾರಿಯ ನಾಡಹಬ್ಬ ದಸರಾಕ್ಕೆ ಅಕ್ಟೋಬರ್ 7 ರಂದು ರಾಜಕೀಯ ಮುತ್ಸದಿ ಎಸ್.ಎಂ. ಕೃಷ್ಣ ಅವರು ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಅವರಿಗೆ ಸಾಥ್ ನೀಡಿದ್ದರು. 

ಬೆಂಗಳೂರು: ಈ ಬಾರಿಯ ನಾಡಹಬ್ಬ ದಸರಾಕ್ಕೆ ಅಕ್ಟೋಬರ್ 7 ರಂದು ರಾಜಕೀಯ ಮುತ್ಸದಿ ಎಸ್.ಎಂ. ಕೃಷ್ಣ ಅವರು ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಅವರಿಗೆ ಸಾಥ್ ನೀಡಿದ್ದರು. 

ಇದೀಗ ಸಾಂಸ್ಕೃತಿಕ ಚಟುವಟಿಕೆಗಳು ಗರಿಗೆದರಿದ್ದು, ಈ ನಡುವೆ ವಿಜಯದಶಮಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿರುವ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಉಳಿದ ಗಜಪಡೆಯನ್ನು ನಿತ್ಯವೂ ಪ್ರಮುಖ ರಸ್ತೆಗಳಲ್ಲಿ ನಡೆಸಿ ಅಭ್ಯಾಸ ಮಾಡಿಸಲಾಗುತ್ತಿದೆ.

ವಿಶೇಷವಾಗಿ ಕ್ಯಾಪ್ಟನ್ ಅಭಿಮನ್ಯುವಿಗೆ ಜಂಬೂ ಸವಾರಿಯ ತಾಲೀಮು ನಡೆಸಲಾಗುತ್ತದೆ. ಇದು ಅಕ್ಟೋಬರ್ 13 ಅಥವಾ 14ರಂದು ನಡೆಯಬಹುದು ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಅಭಿಮನ್ಯುವಿಗೆ ಮರದ ಅಂಬಾರಿ ಹೊರಿಸಲಾಗುತ್ತದೆ. ಅರಮನೆ ಮುಂದೆ ಪುಷ್ಪಾರ್ಚನೆ ಮಾಡಿದ ನಂತರ ಮೆರವಣಿಗೆ ತಾಲೀಮು ಆರಂಭವಾಗುತ್ತದೆ. ಗಜಪಡೆ ಜೊತೆಗೆ ಮೈಸೂರಿನ ಮತ್ತೊಂದು ಪ್ರಮುಖ ಆಕರ್ಷಣೆಯಾದ ಅಶ್ವಪಡೆಯೂ ಸಾಥ್ ನೀಡಲಿದೆ.

ಈ ಮೆರವಣಿಗೆ ತಾಲೀಮು ಉಸ್ತುವಾರಿಯನ್ನು ನಗರ ಪೊಲೀಸ್ ಆಯುಕ್ತರು, ಹಿರಿಯ ಅರಣ್ಯಾಧಿಕಾರಿಗಳು, ಜಂಬೂ ಸವಾರಿಯ ಬಗ್ಗೆ ವಿಶೇಷ ಜ್ಞಾನ ಇರುವ ಹಿರಿಯರು ವಹಿಸುತ್ತಾರೆ. ಪ್ರತಿವರ್ಷವೂ ವಿಜಯದಶಮಿಗೆ ಮುನ್ನ ಅಂಬಾರಿ ಹೊರುವ ಆನೆಗೆ ಮರದ ಅಂಬಾರಿ ಹೊರಿಸಿ ಅಭ್ಯಾಸ ಮಾಡಿಸುವ ರೂಢಿ ನಡೆದು ಬಂದಿದೆ. ಈ ಸಂದರ್ಭದಲ್ಲಿ ಅಂಬಾರಿ ಹೊರುವ ಆನೆಯ ವರ್ತನೆಯನ್ನು ಅಧ್ಯಯನ ಮಾಡಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT