ಕಟ್ಟಡ ಕುಸಿತ 
ರಾಜ್ಯ

ಬೆಂಗಳೂರು: ರಾಮಮೂರ್ತಿನಗರ ಕಟ್ಟಡ ಕುಸಿತ ಪ್ರಕರಣ; ಮನೆ ಮಾಲಕಿ ಬಂಧನ

ಗುರುವಾರ ಸಂಜೆ ರಾಮಮೂರ್ತಿ ಪೊಲೀಸ್ ಠಾಣೆ ವ್ಯಾಪ್ತಿಯ ಕಸ್ತೂರಿ ನಗರದಲ್ಲಿ ಮೂರಂತಸ್ತಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮನೆಯ ಮಾಲಕಿ ಆಯೇಷಾ ಬೇಗಂ ಎಂಬುವರನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಗುರುವಾರ ಸಂಜೆ ರಾಮಮೂರ್ತಿ ಪೊಲೀಸ್ ಠಾಣೆ ವ್ಯಾಪ್ತಿಯ ಕಸ್ತೂರಿ ನಗರದಲ್ಲಿ ಮೂರಂತಸ್ತಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮನೆಯ ಮಾಲಕಿ ಆಯೇಷಾ ಬೇಗಂ ಎಂಬುವರನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.

ದೊಡ್ಡ ಬಾಣಸವಾಡಿ ನಿವಾಸಿ  ಆಯೇಷಾ ಬೇಗಂ ಅವರು ನಾಲ್ಕು ಮನೆಗಳಲ್ಲಿ ಮೂರು ಮನೆಗಳನ್ನು ಬಿಲ್ಡರ್‌ಗೆ ಮಾರಿದ್ದರು ಮತ್ತು ತಮ್ಮ ಕುಟುಂಬಕ್ಕಾಗಿ ಒಂದು ಮನೆಯನ್ನು ಇಟ್ಟುಕೊಂಡಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು. ಬಿಬಿಎಂಪಿ ಅಧಿಕಾರಿಗಳು ತನಿಖೆ ನಡೆಸಿದ್ದು, 2013 ರಲ್ಲಿ ಎರಡು ಹೆಚ್ಚುವರಿ  ಮಹಡಿಗಳನ್ನು ಅಕ್ರಮವಾಗಿ ನಿರ್ಮಿಸುವ ಮೂಲಕ ಸ್ಪಷ್ಟವಾದ ಉಲ್ಲಂಘನೆ ಮಾಡಿದ್ದು, ನಿರ್ಮಾಣ ಗುಣಮಟ್ಟ ಕಳಪೆಯಾಗಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ವಿಚಾರಣೆಗಾಗಿ ನಾವು ಆಯೇಷಾ ಬೇಗ್ ಅವರನ್ನು ಪೋಲಿಸ್ ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ಕನ್ ಸ್ಟ್ರಕ್ಟರ್ ಮತ್ತು ಎಂಜಿನಿಯರ್ ಸೇರಿದಂತೆ ಹೆಚ್ಚಿನ ಜನರನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ವಾರಗಳಲ್ಲಿ ನಡೆದ ಮೂರನೇ ಘಟನೆಯಲ್ಲಿ, ಕಸ್ತೂರಿ ನಗರದ ವೈದ್ಯರ ಬಡಾವಣೆಯಲ್ಲಿ ನಾಲ್ಕು ಅಂತಸ್ತಿನ ಅಪಾರ್ಟ್ ಮೆಂಟ್ ಕುಸಿದಿತ್ತು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ, ಮೂವರು ಬಾಡಿಗೆದಾರರಾದ ಅಂಬರೀಶ್ ಪಾಂಡೆ, ಅಂಕುಶ್ ಅಗರ್ವಾಲ್ ಮತ್ತು ಸಂಜನಾ ಪಾವಟೆ ಅವರನ್ನು ಅಗ್ನಿಶಾಮಕ ಮತ್ತು ತುರ್ತು ಸಿಬ್ಬಂದಿ ರಕ್ಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?