ಸಾಂದರ್ಭಿಕ ಚಿತ್ರ 
ರಾಜ್ಯ

ಲಿಖಿತ್​​ ಕೊಲೆ ಪ್ರಕರಣ ಬೇಧಿಸಿದ ಎಚ್ಎಎಲ್ ಪೊಲೀಸರು: 8 ಗಂಟೆಯೊಳಗೆ ಮೂವರ ಬಂಧನ

ಕೊಲೆ ನಡೆದ 8 ಗಂಟೆಯೊಳಗೆ ಪೊಲೀಸರು ಕಾರ್ಯಾಚರಣೆ ನಡೆಸಿ, ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಕೊಲೆ ನಡೆದ 8 ಗಂಟೆಯೊಳಗೆ ಪೊಲೀಸರು ಕಾರ್ಯಾಚರಣೆ ನಡೆಸಿ, ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೆಚ್‌ಎಎಲ್‌ ಬಳಿಯ ನಿವಾಸಿ ಲಿಖಿತ್ (21) ಕೊಲೆಯಾದ ಯುವಕ. ಶುಕ್ರವಾರ ಲಾಲ್ ಬಹದ್ದೂರ್ ಶಾಸ್ತ್ರಿ ನಗರದಲ್ಲಿ ಲಿಖಿತ್ ನನ್ನು ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದು, ಲಿಖಿತ್ ಸ್ಥಳದಲ್ಲೇ ಮೃತಪಟ್ಟಿದ್ದನು.

ಘಟನೆಗೆ ಸಂಬಂಧಿಸಿದಂತೆ ಹೆಚ್​ಎಎಲ್ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಯೀಮ್​​, ಮೋಹಿನ್, ವಸೀಮ್ ಎಂಬುವವರನ್ನು ಹೆಚ್​​​ ಎಎಲ್​ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಲೆಯಾದ ಲಿಖಿತ್​​ ಮತ್ತು ಆರೋಪಿಗಳು ಎಲ್ಲರೂ ಒಂದೇ ಏರಿಯಾದವರು. ಯುವಕರ ಗುಂಪುಗಳ ನಡುವೆ ಹಣ ಮತ್ತು ಯುವತಿಯ ವಿಚಾರವಾಗಿ ಗಲಾಟೆ ನೆಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಲಿಖಿತ್ ಈ ಮೊದಲು ಸಿದ್ದಿಕ್ ಎಂಬಾತನ ಬಳಿ ಸಾಲ ಪಡೆದಿದ್ದ. ಹಣ ವಾಪಸ್ಸು ಕೇಳಿದಾಗ ಕೊಡದೆ ಅವಾಚ್ಯ ಪದಗಳಿಂದ ನಿಂದಿಸಿದ್ದ. ನಯೀಮ್​​ ಮತ್ತು ಲಿಖಿತ್ ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು. ಯುವತಿ ವಿಚಾರಕ್ಕೆ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು. ಇದೇ ವಿಷಯ ಲಿಖಿತ್​ ಕೊಲೆ​​ಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT